Home ಟಾಪ್ ಸುದ್ದಿಗಳು ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಓರ್ವ ಸಾವು, 300 ಮಂದಿಗೆ ಗಾಯ

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಓರ್ವ ಸಾವು, 300 ಮಂದಿಗೆ ಗಾಯ

ಒಡಿಶಾ: ಒಡಿಶಾದ ಪುರಿಯಲ್ಲಿ ಭಾನುವಾರ ನಡೆದ ಜಗನ್ನಾಥ ರಥಯಾತ್ರೆ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ ಭಕ್ತರೊಬ್ಬರು ಮೃತಪಟ್ಟಿದ್ದು, 300 ಕ್ಕೂ ಭಕ್ತಾಧಿಗಳಿಗೆ ಗಾಯಗಳಾಗಿರುವುದಾಗಿ ವರದಿ ಆಗಿದೆ.

ಇನ್ನು ಮೃತರು ಯಾರೆಂದು ತಿಳಿದುಬಂದಿಲ್ಲ. ಸದ್ಯ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

300ಕ್ಕೂ ಹೆಚ್ಚು ವ್ಯಕ್ತಿಗಳನ್ನು ಪುರಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಸುಮಾರು 50 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ. ಒಡಿಶಾ ಆರೋಗ್ಯ ಕಾರ್ಯದರ್ಶಿ ಆಸ್ಪತ್ರೆಗೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

Join Whatsapp
Exit mobile version