ಶಿರಾಡಿ ಘಾಟ್‌ನಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು, ಐದು ಮಂದಿಗೆ ಗಾಯ

Prasthutha|

ಸಕಲೇಶಪುರ: ಎರಡು ಕಾರುಗಳು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಾವಿಗೀಡಾಗಿ, ಐದು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ವ್ಯಾಪ್ತಿಯ ಕೆಂಪುಹೊಳೆ ಬಳಿ ನಡೆದಿದೆ.

- Advertisement -

ಧರ್ಮಸ್ಥಳದಿಂದ-ಬೆಂಗಳೂರು ಕಡೆಗೆ ಬರುತ್ತಿದ್ದ ಕಾರುಗಳು ಒಂದನ್ನೊಂದು ಹಿಂದಿಕ್ಕುತ್ತಿದ್ದಾಗ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿಗೆ ಕೆಂಪುಹೊಳೆ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ.

ಲಾರಿ ಪ್ರಪಾತಕ್ಕೆ ಬೀಳುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

- Advertisement -

ಓರ್ವನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಂಗಳೂರಿಗೆ ರವಾನಿಸಲಾಗಿದೆ. ಉಳಿದ ಜನರನ್ನು ಸಕಲೇಶಪುರದ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.



Join Whatsapp
Exit mobile version