ಒಂದು ರಾಷ್ಟ್ರ ಒಂದು ಚುನಾವಣೆಯ ಕಲ್ಪನೆಯು ಒಕ್ಕೂಟ ಮೇಲಿನ ದಾಳಿಯಾಗಿದೆ: ರಾಹುಲ್ ಗಾಂಧಿ

Prasthutha|

- Advertisement -

ನವದೆಹಲಿ: ಭಾರತವು ರಾಜ್ಯಗಳ ಒಕ್ಕೂಟ, ಒಂದು ರಾಷ್ಟ್ರ ಒಂದು ಚುನಾವಣೆಯ ಕಲ್ಪನೆಯು ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚಿಸಿದ ನಂತರ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

- Advertisement -

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಶನಿವಾರ ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆಯನ್ನು ಅನುಷ್ಠಾನಗೊಳಿಸುವ ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ರಚಿಸಿರುವ ಸಮಿತಿಯ ಭಾಗವಾಗುವ ಆಹ್ವಾನವನ್ನು ನಿರಾಕರಿಸಿದ್ದಾರೆ.

ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸುಗಳನ್ನು ಮಾಡಲು ಎಂಟು ಸದಸ್ಯರ ಸಮಿತಿಗೆ ಸರ್ಕಾರ ಶನಿವಾರ ಸೂಚನೆ ನೀಡಿದೆ.



Join Whatsapp