ಶಿರೂರು ಗುಡ್ಡ ಕುಸಿತ | ಒಂದು ಟ್ರಕ್ ನೀರಿನಲ್ಲಿ ಮುಳುಗಿರುವುದು ಖಚಿತವಾಗಿದೆ: ಕೃಷ್ಣಬೈರೇಗೌಡ

Prasthutha|

ಅಂಕೋಲಾ: ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಇದುವರೆಗೆ 8 ಮೃತದೇಹಗಳು ಪತ್ತೆಯಾಗಿದೆ. ಅಲ್ಲದೆ ಲಾರಿ ಚಾಲಕ ಅರ್ಜುನ ಸೇರಿದಂತೆ ಇತರರಿಗಾಗಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ.

- Advertisement -

ಭೂಕುಸಿತ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಕೃಷ್ಣಬೈರೇಗೌಡ, “ಒಂದು ಟ್ರಕ್ ನೀರಿನಲ್ಲಿ ಮುಳುಗಿದೆ ಎಂಬುದು ಖಚಿತವಾಗಿದೆ” ಎಂಬುದನ್ನು ದೃಢೀಕರಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಒಂದು ಟ್ರಕ್ ನೀರಿನಲ್ಲಿ ಮುಳುಗಿದೆ ಎಂಬುದು ಖಚಿತವಾಗಿದ್ದು, ನೌಕಾಪಡೆಯ ಡೀಪ್ ಡೈವರ್‌ಗಳು ಶೀಘ್ರದಲ್ಲೇ ಲಂಗರು ಹಾಕಲು ಪ್ರಯತ್ನಿಸುತ್ತಾರೆ. ಟ್ರಕ್‌ ಅನ್ನು ನದಿಯಿಂದ ಮೇಲೆತ್ತಲು ಲಾಂಗ್ ಆರ್ಮ್ ಬೂಮರ್ ಅಗೆಯುವ ಯಂತ್ರವನ್ನು ಬಳಸಲಾಗುವುದು” ಎಂದು ತಿಳಿಸಿದ್ದಾರೆ.

- Advertisement -

ಸುಧಾರಿತ ಡ್ರೋನ್ ಆಧಾರಿತ ಇಂಟೆಲಿಜೆಂಟ್ ಅಂಡರ್‌ಗ್ರೌಂಡ್ ಬರಿಡ್ ಆಬ್ಜೆಕ್ಟ್ ಡಿಟೆಕ್ಷನ್ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ಮೃತದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಮೂಲಕ ಹುಡುಕಾಟ ನಡೆಸುತ್ತಿದೆ” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ



Join Whatsapp