ಭಯೋತ್ಪಾದಕರಿಗೆ ಬೆಂಬಲ ನೀಡಿದವರೇ ಇಂದು ಬಿಜೆಪಿಯಲ್ಲಿದ್ದಾರೆ: ಪ್ರಮೋದ್ ಮುತಾಲಿಕ್ !

Prasthutha|

►ಬಿಜೆಪಿ ಇಂದು ಒರಿಜಿನಲ್ ಆಗಿ ಉಳಿದಿಲ್ಲ

- Advertisement -

ಬಾಗಲಕೋಟೆ: ಕಾಂಗ್ರೆಸ್ ನವರು ಭಯೋತ್ಪಾದಕರನ್ನು ಬೆಳೆಸಿದ್ದಾರೆ. ಯಾರು ಭಯೋತ್ಪಾದಕರಿಗೆ ನೆರವಾಗಿದ್ದರೋ ಅವರು ಇಂದು ಬಿಜೆಪಿಯಲ್ಲಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರಿಗೆ ಹಿಂದುತ್ವ ಇಲ್ಲ. ಅವರಿಗೆ ಬರೀ ಲೂಟಿ ಮಾಡುವುದೇ ಕೆಲಸ. ಇಲ್ಲಿವರೆಗೆ ಕಾಂಗ್ರೆಸ್ ನವರು ಟೆರರಿಸ್ಟ್ ಗಳನ್ನೇ ಬೆಳೆಸಿದ್ದಾರೆ. ಅಂಥವರು ಇಂದು ಬಿಜೆಪಿಯಲ್ಲಿದ್ದಾರೆ. ಅವರಿಗೆ ಹಿಂದುತ್ವ, ಧರ್ಮ, ದೇಶ, ಸಂಸ್ಕೃತಿ, ಮಾನ, ಮರ್ಯಾದೆ ಏನೂ ಇಲ್ಲ. ಬಿಜೆಪಿ ಇಂದು ಓರಿಜಿನಲ್ ಬಿಜೆಪಿ ಆಗಿ ಉಳಿದಿಲ್ಲ ಎಂದು ಟೀಕಿಸಿದ್ದಾರೆ.

- Advertisement -


ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧೆ ಮಾಡದಿರಲು ನಿರ್ಧಾರ ಮಾಡಿದ್ದೇನೆ. ಹಿಂದುತ್ವ ಹೋರಾಟ ಮಾತ್ರ ಮಾಡುತ್ತೇನೆ ಎಂದು ಹೇಳಿದರು.

Join Whatsapp