ಕೇವಲ ಹಿಂದೂಗಳ ಹಬ್ಬಗಳಿಗೆ ನಿರ್ಬಂಧ ಹೇರಿದರೆ ನಡೆಯಲ್ಲ, ಮೊಹರ್ರಂ ಸೇರಿ ಎಲ್ಲಾ ಹಬ್ಬಗಳಿಗೂ ನಿರ್ಬಂಧ ಹೇರಿ: ಯತ್ನಾಳ್

Prasthutha|

ವಿಜಯಪುರ: ಕೊವಿಡ್ ನೆಪದಲ್ಲಿ ಕೇವಲ ಹಿಂದೂಗಳ ಹಬ್ಬಕ್ಕೆ ನಿರ್ಬಂಧ ವಿಧಿಸಿದರೆ ನಡೆಯಲ್ಲ. ಮೊಹರ್ರಂ ಸೇರಿದಂತೆ ಮುಂಬರುವ ಎಲ್ಲ ಹಬ್ಬಗಳಿಗೂ ನಿರ್ಬಂಧ ಹೇರಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

- Advertisement -

ಬಿಜೆಪಿ ಸರ್ಕಾರ, ಬೊಮ್ಮಾಯಿ ಸರ್ಕಾರದಲ್ಲಿ ಅವರಿಗೊಂದು ಕಾನೂನು, ನಮಗೊಂದು ಕಾನೂನು ನಡಿಯಲ್ಲ ಅಂದುಕೊಂಡಿದ್ದೇನೆ. ಕೇವಲ ಹಿಂದೂಗಳಿಗೆ ಮಾತ್ರ ನಿರ್ಬಂಧ ಹಾಕಿದರೆ ಅದನ್ನು ಉಲ್ಲಂಘನೆ ಮಾಡುತ್ತೇವೆ ಎಂದು ಯತ್ನಾಳ್ ಎಚ್ಚರಿಸಿದರು.

ಆನಂದ್ ಸಿಂಗ್ ಉತ್ತಮ ಆಡಳಿತಗಾರರು. ಅವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಸರ್ಕಾರದ ರಚನೆಯಲ್ಲಿ ಆನಂದ್ ಸಿಂಗ್ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

- Advertisement -

ಮೀಸಲಾತಿ ನೀಡುವ ಅಧಿಕಾರ ರಾಜ್ಯಗಳಿಗೆ ನೀಡಲಾಗಿದೆ. ಆದಷ್ಟು ಬೇಗ ಪಂಚಮಸಾಲಿ ಸಮಾಜ, ಆದಿ ಬಣಜಿಗ, ಕೂಡುಒಕ್ಕಲಿಗ ಸಮಾಜಗಳಿಗೆ 2 ಎ ಮೀಸಲಾತಿ ನೀಡಬೇಕು. ಸಿಎಂ ಕ್ರಮ ತೆಗೆದುಕೊಳ್ಳದಿದ್ದರೆ ಅನಿವಾರ್ಯವಾಗಿ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

Join Whatsapp