Home ಟಾಪ್ ಸುದ್ದಿಗಳು ಕಾವೇರಿ ಕಿಚ್ಚು: KRS ಜಲಾಶಯದ ಬಳಿ ನೀರಿಗಿಳಿದು ರೈತರ ಪ್ರತಿಭಟನೆ

ಕಾವೇರಿ ಕಿಚ್ಚು: KRS ಜಲಾಶಯದ ಬಳಿ ನೀರಿಗಿಳಿದು ರೈತರ ಪ್ರತಿಭಟನೆ

ಮಂಡ್ಯ: ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಅದರಂತೆ ಸರ್ಕಾರ ಹೆಚ್ಚುವರಿ ನೀರನ್ನು ಹರಿಸುತ್ತಿದ್ದು, ಈ ಹಿನ್ನಲೆ ರಾಜ್ಯ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ರೈತಸಂಘದ ಕಾರ್ಯಕರ್ತರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್​ಎಸ್ ಜಲಾಶಯದ ಬಳಿ ಕಾವೇರಿ ನದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಡಾ.ಕೆ.ಅನ್ನದಾನಿ, ‘ಮಂಡ್ಯ ಎಂಬ ಬೆಂಕಿ ಚೆಂಡನ್ನು ವಿಧಾನಸೌಧಕ್ಕೆ ಎಸೆಯುತ್ತೇವೆ. ಮಂಡ್ಯ ಜಿಲ್ಲೆ ಬೆಂಕಿ ಚೆಂಡು ಇದ್ದಂತೆ. ಚೆಂಡು ಎಸೆದ್ರೆ ಎಲ್ಲರೂ ಉರಿದುಹೋಗ್ತೀರಿ. ಕದ್ದು ನೀರು ಬಿಟ್ಟರೆ ನಿಮ್ಮನ್ನು ಕಳ್ಳ ಸರ್ಕಾರ ಎನ್ನಬೇಕಾಗುತ್ತೆ. ರಾತ್ರಿ 9 ಗಂಟೆಯ ನಂತರ ಕದ್ದು ನೀರು ಬಿಡುತ್ತೀರಿ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Join Whatsapp
Exit mobile version