ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯ ಸರ್ವೀಸ್ ರಸ್ತೆಗಳನ್ನು ಆದಷ್ಟು ಬೇಗ ಮುಕ್ತಗೊಳಿಸಿ: ಎಸ್.ಡಿ.ಪಿ.ಐ

Prasthutha|

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದರೂ ಎರಡೂ ಬದಿಯ ಸರ್ವೀಸ್ ರಸ್ತೆಗಳನ್ನು ಸಾರ್ವಜನಿಕ ವಾಹನ ಓಡಾಟಕ್ಕೆ ಮುಕ್ತಗೊಳಿಸಬೇಕೆಂದು ಎಸ್.ಡಿ.ಪಿ.ಐ ಮಂಜೇಶ್ವರ ಮಂಡಲ ಸಮಿತಿ ಆಗ್ರಹಿಸಿದೆ.
ಮಂಡಲ ಸಮಿತಿ ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಎ.ಎಚ್. ಮುನೀರ್’ಅವರು, ಸರ್ವೀಸ್ ರಸ್ತೆಗಳನ್ನು ಶೀಘ್ರ ಪೂರ್ಣಗೊಳಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ದಿನನಿತ್ಯದ ಪ್ರಯಾಣಿಕರು ಮತ್ತು ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ಒತ್ತಾಯಿಸಿದರು.
ಮಂಡಲಾಧ್ಯಕ್ಷ ಅಶ್ರಫ್ ಬಡಾಜೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಆರಿಫ್ ಖಾದರ್ ಸ್ವಾಗತಿಸಿದರು. ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್ ಹೊಸಂಗಡಿ, ಜಿಲ್ಲಾ ಕಾರ್ಯದರ್ಶಿ ಸವಾದ್, ಘಟಕದ ಕೋಶಾಧಿಕಾರಿ ಶರೀಫ್ ಪಾವೂರು ಮುಂತಾದವರು ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ತಾಜು ಉಪ್ಪಳ ವಂದಿಸಿದರು.

Join Whatsapp