12 ರಾಜ್ಯಸಭಾ ಸಂಸದರ ಅಮಾನತು ಹಿಂಪಡೆಯಲು ಒತ್ತಾಯಿಸಿ ಪ್ರತಿಪಕ್ಷಗಳಿಂದ ಪ್ರತಿಭಟನೆ

Prasthutha|

ನವದೆಹಲಿ: 12 ರಾಜ್ಯಸಭಾ ಸಂಸದರ ಅಮಾನತು ಹಿಂಪಡೆಯುವಂತೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ಮುಖಂಡರು ಮಂಗಳವಾರ ಸಂಸತ್ತಿನಿಂದ ವಿಜಯ್ ಚೌಕ್‌ವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು.

- Advertisement -

ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯ ಸಭಾಂಗಣದಲ್ಲಿ ಸಭೆ ಸೇರಿದ ವಿವಿಧ ಪಕ್ಷಗಳ ಮುಖಂಡರು ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಿದ್ದರು.

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಈ ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ವಿರೋಧ ಪಕ್ಷದ ಮುಖಂಡ ಬೆಂಬಲ ಸೂಚಿಸಿದರು.

- Advertisement -

ಕಳೆದ ಆಗಸ್ಟ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಅಶಿಸ್ತಿನ ವರ್ತನೆಗಾಗಿ ನವೆಂಬರ್ 29 ರಂದು 12 ಪ್ರತಿಪಕ್ಷ ಸಂಸದರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp