Home ಟಾಪ್ ಸುದ್ದಿಗಳು ಇಂಧನ ಬೆಲೆ ಏರಿಕೆ ಖಂಡಿಸಿ ಲೋಕಸಭೆ ಕಲಾಪ ಬಹಿಷ್ಕರಿಸಿದ ಪ್ರತಿಪಕ್ಷ ಸದಸ್ಯರು

ಇಂಧನ ಬೆಲೆ ಏರಿಕೆ ಖಂಡಿಸಿ ಲೋಕಸಭೆ ಕಲಾಪ ಬಹಿಷ್ಕರಿಸಿದ ಪ್ರತಿಪಕ್ಷ ಸದಸ್ಯರು

ನವದೆಹಲಿ: ಐದು ರಾಜ್ಯಗಳ ಚುನಾವಣೆ ಮುಗಿದ 137 ದಿನಗಳ ವಿರಾಮದ ನಂತರ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸಿರುವುದನ್ನು ಖಂಡಿಸಿ ಶುಕ್ರವಾರ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರು ಕಲಾಪ ಬಹಿಷ್ಕರಿಸಿದರು.

ಗೌರವ್ ಗೊಗೊಯ್ (ಕಾಂಗ್ರೆಸ್) ಶೂನ್ಯ ವೇಳೆಯಲ್ಲಿ ಇಂಧನ ಬೆಲೆಗಳ ಏರಿಕೆಯ ವಿಷಯವನ್ನು ಪ್ರಸ್ತಾಪಿಸಿದರು, ಹಣದುಬ್ಬರ ಮತ್ತು ಕೊರೊನಾವೈರಸ್ ಸಾಂಕ್ರಾಮಿಕದ ನಂತರ ಜನರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ.  ಇಷ್ಟರಲ್ಲೇ  ಕೇಂದ್ರ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿ ಅವರ ಬದುಕನ್ನು ಸಂಕಷ್ಟಮಯಗೊಳಿಸಿದೆ. ಈ ಬಗ್ಗೆ ನಿರ್ಮಲಾ ಸೀತಾರಾಮನ್ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್, ಡಿಎಂಕೆ, ಎನ್ ಸಿಪಿ, ಎಡಪಕ್ಷಗಳು, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮತ್ತು ಐಯುಎಂಎಲ್ ಸೇರಿದಂತೆ ಇತರ ಪಕ್ಷಗಳ ಸದಸ್ಯರು ಈ ವಿಷಯದ ಬಗ್ಗೆ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಕಲಾಪ ಬಹಿಷ್ಕರಿಸಿದರು.

Join Whatsapp
Exit mobile version