ಮಲ್ಲಿಕಾರ್ಜುನ ಖರ್ಗೆ ಗೆ ಉದ್ದೇಶಪೂರ್ವಕ ಅಗೌರವ: ವಿರೋಧ ಪಕ್ಷಗಳಿಂದ ರಾಜ್ಯಸಭೆಯ ಸಭಾಪತಿಗೆ ಪತ್ರ

Prasthutha|

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ಸ್ಥಾನಕ್ಕೆ ಅನುಗುಣವಾಗಿಲ್ಲದ ಆಸನದಲ್ಲಿ ಕುಳಿತುಕೊಳ್ಳುವಂತೆ ಮಾಡಲಾಗಿದೆ ಎಂದು ಆರೋಪಿಸಿ ಎಲ್ಲಾ ವಿರೋಧ ಪಕ್ಷಗಳು ರಾಜ್ಯಸಭೆಯ ಸಭಾಪತಿಗೆ ಪತ್ರವನ್ನು ಸಲ್ಲಿಸಿವೆ.

- Advertisement -

ಅತ್ಯಂತ ಹಿರಿಯ ನಾಯಕನಿಗೆ ತೋರಿದ ಈ ಉದ್ದೇಶಪೂರ್ವಕ ಅಗೌರವದ ಬಗ್ಗೆ  ನಮಗೆ ಅಘಾತವಾಗಿದೆ. ಅವರಿಗೆ ನೀಡಬೇಕಾದ ಶಿಷ್ಟಾಚಾರ ಸೌಜನ್ಯಗಳನ್ನು ಪಾಲಿಸಲಾಗಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮುಂಗಾರು ಅಧಿವೇಶನದ ಕಾರ್ಯಕಲಾಪಗಳು ಪ್ರಾರಂಭವಾಗುವ ಮೊದಲು, ದ್ರೌಪದಿ ಮುರ್ಮು ಭಾರತದ 15 ನೇ ಅಧ್ಯಕ್ಷರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

Join Whatsapp