ದ.ಕ. ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ

Prasthutha|

ಮಂಗಳೂರು: ಭಾರತೀಯ ಹವಾಮಾನ ಇಲಾಖೆಯು ಜೂ.25, 26ರಂದು ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.

- Advertisement -


ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸಮುದ್ರದಿಂದ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು ತಿಳಿಸಿದೆ.


ದ.ಕ.ಜಿಲ್ಲೆಯ ಮಂಗಳೂರು, ಪುತ್ತೂರು, ಬಂಟ್ವಾಳ, ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸಹಿತ ಹಲವಡೆ ಸೋಮವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಬಳಿಕ ಮೋಡಕವಿದ ವಾತಾವರಣ ಕಂಡುಬಂದಿದೆ. ಸಂಜೆ ವೇಳೆ ಅಲ್ಲಲ್ಲಿ ಮಳೆಯಾಗಿದೆ.



Join Whatsapp