ಭಾರೀ ಮಳೆ ಹಿನ್ನೆಲೆ: ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

Prasthutha|

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ಬಿರುಗಾಳಿಯೊಂದಿಗೆ ದಿನವಿಡೀ ಉತ್ತಮ ಮಳೆಯಾಗಿದ್ದು, ಇಂದು ಆರೆಂಜ್ ಅಲರ್ಟ್ ಘೋಷಣೆ ಘೋಷಣೆ ಮಾಡಲಾಗಿದೆ.

- Advertisement -


ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಕ್ರಮವಾಗಿ ಆರೆಂಜ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


ಸದ್ಯ ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಮತ್ತೆ ಹೆಚ್ಚಾಗಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವುದರಿಂದ ಸ್ಥಳೀಯರಿಗೆ, ಪ್ರವಾಸಿಗರಿಗೆ ಹಾಗೂ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Join Whatsapp