ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ರಾಹುಲ್ ಗಾಂಧಿ ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 1.45 ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದು, ಬಳಿಕ 3.30 ಸುಮಾರಿಗೆ ಫರ್ನಾಂಡಿಸ್ ಅಂತಿಮ ಆಶಿರ್ವಚನ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆಂದು ಡಿ.ಕೆ ಶಿವಕುಮಾರ್ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
![](https://prasthutha.com/wp-content/uploads/2021/09/2a966743-aa19-4689-bcdc-99c163d3b1ab-1024x576.jpg)
ಬೆಂಗಳೂರಿನ ಚರ್ಚ್ ನಲ್ಲಿ ಆಸ್ಕರ್ ಫರ್ನಾಂಡಿಸ್ ಅಂತ್ಯ ಸಂಸ್ಕಾರ ನೆರವೇರಿಸಲು ಸಿದ್ಧತೆ ಕೈಗೊಳ್ಳಲಾಗಿದ್ದು, ಕೇಂದ್ರದ ಹಿರಿಯ ನಾಯಕರು ಆಸ್ಕರ್ ಅಂತಿಮ ದರ್ಶನ ಪಡೆಯಲಿದ್ದಾರೆ.