ನಮ್ಮ ದೇಶ ಯಾವಾಗಲೂ ಶಾಂತಿಗಾಗಿ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ: ಪಾಕಿಸ್ತಾನ

Prasthutha|

ಇಸ್ಲಾಮಾಬಾದ್: ಭಾರತದ ರಕ್ಷಣ ಸಚಿವ ರಾಜನಾಥ್ ಸಿಂಗ್ ಹೇಳಿಕೆಗೆ ಪಾಕಿಸ್ತಾನ ಪ್ರತಿಕ್ರಿಯಿಸಿದೆ. ದೇಶದ ಸಾರ್ವಭೌಮತ್ವವನ್ನು ಕಾಪಾಡುವ ಉದ್ದೇಶ ಮತ್ತು ಸಾಮರ್ಥ್ಯದಲ್ಲಿ ತಾನು ದೃಢನಿಶ್ಚಯ ಹೊಂದಿದೆ ಎಂದು ಹೇಳಿದೆ.

- Advertisement -

ಭಯೋತ್ಪಾದಕ ದಾಳಿ ನಡೆಸಿ ನೆರೆಯ ಪಾಕಿಸ್ಥಾನಕ್ಕೆ ಓಡಿಹೋದರೆ ಭಾರತ ಪಾಕಿಸ್ಥಾನವನ್ನು ಪ್ರವೇಶಿಸಲಿದೆ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ ಮರುದಿನ ಪಾಕಿಸ್ತಾನ ಪ್ರತಿಕ್ರಿಯೆ ನೀಡಿದೆ.

ನಮ್ಮ ದೇಶ ಯಾವಾಗಲೂ ಶಾಂತಿಗಾಗಿ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ ಆದರೆ ಶಾಂತಿಯ ಬಯಕೆಯನ್ನು ತಪ್ಪಾಗಿ ಗ್ರಹಿಸಬಾರದು ಎಂದು ಪಾಕಿಸ್ಥಾನದ ವಿದೇಶಾಂಗ ಕಚೇರಿಯ ಹೇಳಿಕೆ ನೀಡಿದೆ.

- Advertisement -

ಪಾಕಿಸ್ಥಾನದ ದೃಢ ಸಂಕಲ್ಪ ಮತ್ತು ತನ್ನನ್ನು ತಾನು ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನು ಇತಿಹಾಸವು ದೃಢೀಕರಿಸುತ್ತದೆ, ಭಾರತದ ಆಡಳಿತ ವ್ಯವಸ್ಥೆ ಚುನಾವಣ ಲಾಭಕ್ಕಾಗಿ ದ್ವೇಷಪೂರಿತ ವಾಕ್ಚಾತುರ್ಯವನ್ನು ಆಶ್ರಯಿಸುತ್ತಿದೆ ಎಂದು ಪಾಕಿಸ್ತಾನ ಭಾರತದ ರಕ್ಷಣಾ ಸಚಿವರ ಹೇಳಿಕೆಯನ್ನು ಟೀಕಿಸಿದೆ.

Join Whatsapp