Home ಟಾಪ್ ಸುದ್ದಿಗಳು ನಮ್ಮ ಸರ್ಕಾರ ಅಲ್ಲಾಡಿಸಲು ಸಾಧ್ಯವಿಲ್ಲ, ಅದು ನಿಮ್ಮ ಭ್ರಮೆ: ಡಿಕೆ ಶಿವಕುಮಾರ್

ನಮ್ಮ ಸರ್ಕಾರ ಅಲ್ಲಾಡಿಸಲು ಸಾಧ್ಯವಿಲ್ಲ, ಅದು ನಿಮ್ಮ ಭ್ರಮೆ: ಡಿಕೆ ಶಿವಕುಮಾರ್

ರಾಮನಗರ: ನಮ್ಮ ಸರ್ಕಾರವನ್ನು ಅಲ್ಲಾಡಿಸುವುದಕ್ಕೆ ಆಗುವುದಿಲ್ಲ. ಅದು ನಿಮ್ಮ ಭ್ರಮೆ. ತಿರುಕನ ಕನಸು ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ಮಾಡಿದ್ದಾರೆ.


ಮುಡಾ ಹಗರಣದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕೊಡಲು ರಾಮನಗರದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವೆಂಬರ್, ಡಿಸೆಂಬರ್ ಗೆ ಸರ್ಕಾರ ಪಲ್ಟಿ ಮಾಡುತ್ತೇವೆ ಅಂತಾರೆ. ಅದೇನು ಹೊಡೆಯೋಕೆ ಮಡಕೆನಾ ಎಂದು ಟಾಂಗ್ ನೀಡಿದ್ದಾರೆ.


ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ. ದೇಶವನ್ನ ಆಳುವ ಶಕ್ತಿ ಮತ್ತೆ ಉದ್ಭವ ಆಗುತ್ತೆ. 2028ಕ್ಕೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದಾರೆ. ಪಾದಯಾತ್ರೆ ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ಮೈಸೂರು, ಪಾಂಡವಪುರ ಕಡೆ ಕಾಂಗ್ರೆಸ್ ಶಾಸಕರು ಇದ್ದಾರೆ. ನಿನ್ನೆ ಜೆಡಿಎಸ್ ಬಾವುಟವೇ ಇರಲಿಲ್ಲ. ನಾವು ನಿನ್ನೆ ಮಾತಾಡಿದ್ದಕ್ಕೆ ಜೆಡಿಎಸ್ ಬಾವುಟ ಹಾಕಿದ್ದಾರೆ ಎಂದರು.

Join Whatsapp
Exit mobile version