ನಮ್ಮ ಸರ್ಕಾರ ಯಾವುದೇ ದ್ವೇಷ ರಾಜಕಾರಣ ಮಾಡುತ್ತಿಲ್ಲ: ಪರಮೇಶ್ವರ್

Prasthutha|

ಬೆಂಗಳೂರು: ನಮ್ಮ ಸರ್ಕಾರ ಯಾವುದೇ ದ್ವೇಷ ರಾಜಕಾರಣ ಮಾಡುತ್ತಿಲ್ಲ. ಮಾಡುತ್ತಿರುವವರು ಅವರು ಎಂದು ಬಿಜೆಪಿ ನಾಯಕರ ವಿರುದ್ಧ ಸರ್ಕಾರ ಎಫ್ ಐಆರ್ ದಾಖಲಿಸಿರುವ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

- Advertisement -


ನಾಗಮಂಗಲ ಗಲಭೆ ವಿಚಾರವಾಗಿ ಸುಳ್ಳು ಮಾಹಿತಿ ಹಂಚಿಕೆ ಆರೋಪದಡಿ ಶೋಭಾ ಕರಂದ್ಲಾಜೆ ಹಾಗೂ ಆರ್.ಅಶೋಕ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ನಮ್ಮ ಸರ್ಕಾರ ಯಾವುದೇ ದ್ವೇಷ ಕಾರಣ ಮಾಡುತ್ತಿಲ್ಲ. ನಮಗೆ ಅದರ ಅವಶ್ಯಕತೆಯೂ ಇಲ್ಲ. ಇನ್ನೂ ದ್ವೇಷ ರಾಜಕಾರಣ ಮಾಡುತ್ತಿರುವವರು ಅವರು. ನಾವು ಕಾನೂನು ವಿರುದ್ಧವಾಗಿ ಮಾಡಿದೀವಿ ಎಂದು ಅವರು ಹೇಳುತ್ತಿರಲಿ. ನಮ್ಮನ್ನು ಜನ ಆರಿಸಿದ್ದಾರೆ. ನಾವು ಕೆಲಸ ಮಾಡುತ್ತಿದ್ದೇವೆ. ಇದನ್ನು ಬಿಟ್ಟು ನಮಗೆ ದ್ವೇಷ ರಾಜಕಾರಣದ ಅಗತ್ಯವಿಲ್ಲ ಎಂದು ಕಿಡಿಕಾರಿದ್ದಾರೆ.


ಇದೇ ವೇಳೆ ಮುನಿರತ್ನ ವಿಚಾರವಾಗಿ ಮಾತನಾಡಿದ ಅವರು, ಮುನಿರತ್ನ ವಿರುದ್ಧ ಮಹಿಳೆ ದೂರು ಕೊಟ್ಟ ವಿಚಾರವಾಗಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಇದರ ಬಗ್ಗೆ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಕಾನೂನು ಬಾಹಿರ ಕೆಲಸ ಮಾಡಿದ್ದರೆ, ಏನು ಕ್ರಮ ಆಗಬೇಕು ಅದು ಆಗುತ್ತದೆ ಎಂದು ತಿಳಿಸಿದರು.



Join Whatsapp
Exit mobile version