Home ಟಾಪ್ ಸುದ್ದಿಗಳು ರಾಜ್ಯಪಾಲರನ್ನು ನಮ್ಮ ನಾಯಕರು ನಿಂದನೆ ಮಾಡಿಲ್ಲ: ಸಿದ್ದರಾಮಯ್ಯ

ರಾಜ್ಯಪಾಲರನ್ನು ನಮ್ಮ ನಾಯಕರು ನಿಂದನೆ ಮಾಡಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಪಾಲರು ಮಾಡಿರುವ ಕೆಲಸವನ್ನು ನಮ್ಮ ನಾಯಕರು ಹೇಳಿದ್ದಾರೆ. ಅದನ್ನು ರಾಜ್ಯಪಾಲರನ್ನು ಹೀಯಾಳಿಸಿದರು ಅನ್ನೋದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ರಾಜ್ಯಪಾಲರನ್ನು ಕಾಂಗ್ರೆಸ್ ನಾಯಕರು ನಿಂದಿಸಿರುವ ಕುರಿತು ಬಿಜೆಪಿಯಿಂದ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರು ಮಾಡಿರುವ ಕೆಲಸವನ್ನು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಇದನ್ನು ಹೇಳಿದರೆ ಹೀಯಾಳಿಸಿದ ರೀತೀನಾ? ಶಶಿಕಲಾ ಜೊಲ್ಲೆ ಕೇಸ್ ಇದೆ, ನಿರಾಣಿ ಕೇಸ್ ಇದೆ. ಕುಮಾರಸ್ವಾಮಿ ಕೇಸ್ ಇದೆ. ಜನಾರ್ದನ ರೆಡ್ಡಿ ಮೇಲೆ ಕೇಸ್ ಇದೆ. ಇವುಗಳಿಗೆ ಪರ್ಮಿಷನ್ ಕೊಟ್ಟಿಲ್ಲ. ಇದನ್ನು ಹೇಳಿದ್ರೆ ತಪ್ಪಾ ಎಂದು ಪ್ರಸ್ನಿಸಿದರು.


ರಾಜ್ಯಪಾಲರ ಹುದ್ದೆ ಸಂವಿಧಾನಿಕ ಹುದ್ದೆ. ಅದರ ಬಗ್ಗೆ ಗೌರವ ಇರಬೇಕು. ನಾವು ಹೇಳೋದು ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ಪ್ರತಿನಿಧಿ ಆಗಿ ಕೆಲಸ ಮಾಡೋದು ಬೇಡ ಎಂದರು.

Join Whatsapp
Exit mobile version