ಲೋಕಸಭೆಗೆ ನಾನು ಸ್ಪರ್ಧಿಸುವ ಬಗ್ಗೆ ನಮ್ಮ ನಾಯಕರು ತೀರ್ಮಾನಿಸುತ್ತಾರೆ: ಪ್ರೀತಂ ಗೌಡ

Prasthutha|

ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರು ನಿರ್ಧರಿಸುತ್ತಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹೇಳಿದರು.

- Advertisement -

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪರ್ಧಿಸುವ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು, ಬಿ.ಎಸ್. ಯಡಿಯೂರಪ್ಪ ಅವರು ಇದ್ದಾರೆ, ಬಿ.ವೈ.ವಿಜಯೇಂದ್ರ ಇದ್ದಾರೆ ಎನ್ನುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ಅಲ್ಲದೇ ಈ ಹಿಂದೆ ಪ್ರೀತಂಗೌಡ 2018ರಲ್ಲಿ ಏನಾಗಿದ್ದ, 2023ರಲ್ಲಿ ಏನಾದ, 2028ರಲ್ಲಿ ಏನಾಗ್ತಾನೆ ಮುಂದೆ ನೋಡಬಹುದು. 2023ರಲ್ಲಿ ಸೋಲಿಸಿ ಅಂದಿದ್ದಾರೆ, ಈಗ ತಮ್ಮ ಅಂದಿದ್ದಾರೆ ಮುಂದೆ ಏನು ಅಂತಾರೆ ಗೊತ್ತಿಲ್ಲ ಎಂದು ಟಾಂಗ್ ನೀಡಿದ ಅವರು, ನಾನು ರಾಜಕೀಯದಲ್ಲಿ ಶಕ್ತಿಯುತವಾಗಿ ಬೆಳೆಯಲು ಬಿ.ಸಿ.ಯಡಿಯೂರಪ್ಪ ಅವರ ಆಶೀರ್ವಾದ ಕಾರಣ. ನಾನು ಯುವಕ ಇರೋದಕ್ಕೆ 78 ಸಾವಿರ ಮತಗಳನ್ನು ಹಾಕಿದ್ದಾರೆ, ಅವರು ಹಿರಿಯರಿದ್ದಾರೆ, ಜಾಸ್ತಿ ಮಾತನಾಡಲ್ಲ. ಜನ ಎಲ್ಲವನ್ನು ಗಮನಿಸುತ್ತಿದ್ದಾರೆ ಎಂದು ಹೇಳಿದರು.

Join Whatsapp