ಲಕ್ನೋ: ಮದುವೆಗೆ ತೆರಳುತ್ತಿದ್ದ ಬಸ್ ಮೇಲೆ ಹೈಟೆನ್ಷನ್ ಕರೆಂಟ್ ವೈರ್ ಬಿದ್ದು ಬಸ್ ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದಾರೆ.
ಒಟ್ಟು 36 ಜನ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.
ಡಿಎಂ, ಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.