Home ಟಾಪ್ ಸುದ್ದಿಗಳು ಗದ್ದೆಗೆ ಉರುಳಿದ ಬಸ್: 40ಕ್ಕೂ ಹೆಚ್ಚು ಮಂದಿಗೆ ಗಾಯ

ಗದ್ದೆಗೆ ಉರುಳಿದ ಬಸ್: 40ಕ್ಕೂ ಹೆಚ್ಚು ಮಂದಿಗೆ ಗಾಯ

ಮೈಸೂರು: ಭತ್ತದ ಗದ್ದೆಗೆ ಕೆಎಸ್ ಆರ್ ಟಿಸಿ ಬಸ್ ಉರುಳಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ತಾಲ್ಲೂಕಿನ ಕೆಸ್ತೂರು ಕೊಪ್ಪಲು ಗೇಟ್ ಬಳಿ ಸಂಭವಿಸಿದೆ.


ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿತು. ಬಸ್ ಬಿದ್ದ ರಭಸಕ್ಕೆ ಸೀಟುಗಳೆಲ್ಲ ಮುರಿದು ಒಂದರ ಮೇಲೊಂದು ಬಿದ್ದಿವೆ. ಚಾಲಕನ ಕೈ ಮುರಿದಿದ್ದು, ಕೆಲವು ಪ್ರಯಾಣಿಕರ ತಲೆಗೆ ತೀವ್ರ ಪೆಟ್ಟಾಗಿದೆ.

Join Whatsapp
Exit mobile version