ಮಹಾರಾಷ್ಟ್ರ | ರಾಜ್ಯಸಭಾ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ರಾಜೀನಾಮೆ

Prasthutha|

ಮುಂಬೈ: ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ತನ್ನ ತವರು ರಾಜ್ಯ ತಮಿಳುನಾಡಿನಿಂದ ರಾಜ್ಯಸಭೆಗೆ ಹೊಸ ಅವಧಿಗೆ ಆಯ್ಕೆಯಾದ ಬಳಿಕ ಮಹಾರಾಷ್ಟ್ರದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜುಲೈ 4ಕ್ಕೆ ಅವರ ಅವಧಿ ಮುಗಿಯುತ್ತಿದ್ದು, ಇನ್ನು 18 ದಿನಗಳು ಬಾಕಿಯಿರುವಾಗಲೇ ರಾಜೀನಾಮೆ ನೀಡಿದ್ದಾರೆ.

- Advertisement -

ಈ ತಿಂಗಳ ಆರಂಭದಲ್ಲಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ 41 ವಿಜೇತರಲ್ಲಿ ಚಿದಂಬರಂ ಕೂಡ ಸೇರಿದ್ದಾರೆ.

ತಮಿಳುನಾಡು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಮಹಾರಾಷ್ಟ್ರ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ. ಅದರಂತೆ ತಾನು ಮಹಾರಾಷ್ಟ್ರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

- Advertisement -

ಸದ್ಯ ರಾಜ್ಯಸಭೆಯ ಅಧ್ಯಕ್ಷರು ತನ್ನ ರಾಜೀನಾಮೆಯನ್ನು ಅಂಗೀಕರಿಸಿದ್ದು, ಮಹಾರಾಷ್ಟ್ರವನ್ನು ಪ್ರತಿನಿಧಿಸಿದ ಗೌರವ ನನಗೆ ದೊರೆತಿದೆ. ಭವಿಷ್ಯದಲ್ಲಿ ಮಹಾರಾಷ್ಟ್ರದ ಜನರು ಶಾಂತಿ ಮತ್ತು ಸಮೃದ್ಧಿಯನ್ನು ಹೊಂದಲಿ ಎಂದು ನಾನು ಬಯಸುತ್ತೇನೆ ಎಂದು ಮಾಜಿ ಕೇಂದ್ರ ಸಚಿವ ತಿಳಿಸಿದ್ದಾರೆ

Join Whatsapp