ಮುರುಘಾ ಶ್ರೀ ಮಠದ ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಿದ ಪಿ ಸಾಯಿನಾಥ್

Prasthutha|

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಸ್ವಾಮೀಜಿಯವರ ಬಂಧನವಾಗಿರುವುದರಿಂದ ಮುರುಘಾ ಮಠದಿಂದ ನೀಡಲ್ಪಟ್ಟ ಬಸವಶ್ರೀ ಪ್ರಶಸ್ತಿಯನ್ನು ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು ಹಿಂದಿರುಗಿಸಿದ್ದಾರೆ.

- Advertisement -

ಚಿತ್ರದುರ್ಗದ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಅವರ ಕುರಿತು ಮಾಧ್ಯಮಗಳಲ್ಲಿ ಕೇಳಿಬಂದ ವರದಿ ನೋಡಿ ತುಂಬಾ ಬೇಸರವಾಗಿದೆ. ಅವರು ಈಗ ಪೋಕ್ಸೊ ಮತ್ತು ಎಸ್ಸಿ / ಎಸ್ಟಿ ಕಾಯ್ದೆಯಡಿ ಮಕ್ಕಳ ಮೇಲೆ, ವಿಶೇಷವಾಗಿ ಪ್ರೌಢಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ಮತ್ತು ಆರೋಪಗಳನ್ನು ಎದುರಿಸುತ್ತಿದ್ದಾರೆ.  ಸಂತ್ರಸ್ತರಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಲ್ಲಿ 2017 ರಲ್ಲಿ ಮಠವು ನನಗೆ ನೀಡಿದ ಬಸವಶ್ರೀ ಪ್ರಶಸ್ತಿಯನ್ನು (ಮತ್ತು ಅದರೊಂದಿಗೆ ಬಂದ 5 ಲಕ್ಷ ರೂ.ಗಳ ಬಹುಮಾನದ ಹಣವನ್ನು ಚೆಕ್ ಮೂಲಕ) ಈ ಮೂಲಕ ಹಿಂದಿರುಗಿಸುತ್ತೇನೆ ಎಂದು ಪಿ,ಸಾಯಿನಾಥ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.   

Join Whatsapp