Home ಟಾಪ್ ಸುದ್ದಿಗಳು ನಮ್ಮ ತಂದೆ ತೀರಿಕೊಂಡಾಗ ಆದ ನೋವಾಗುತ್ತಿದೆ: ವಯನಾಡ್ ಸಂತ್ರಸ್ತರ ಭೇಟಿ ಬಳಿಕ ರಾಹುಲ್ ಗಾಂಧಿ ಭಾವುಕ

ನಮ್ಮ ತಂದೆ ತೀರಿಕೊಂಡಾಗ ಆದ ನೋವಾಗುತ್ತಿದೆ: ವಯನಾಡ್ ಸಂತ್ರಸ್ತರ ಭೇಟಿ ಬಳಿಕ ರಾಹುಲ್ ಗಾಂಧಿ ಭಾವುಕ

ವಯನಾಡು: ಭೂಕುಸಿತ ಮತ್ತು ಪ್ರವಾಹಕ್ಕೆ ಒಳಗಾಗಿರುವ ವಯನಾಡಿಗೆ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ವಯನಾಡಿನ ಪ್ರವಾಹಪೀಡಿತ ಸಂತ್ರಸ್ತರನ್ನು ಭೇಟಿಯಾದ ರಾಹುಲ್ ಗಾಂಧಿ, ನಮ್ಮ ತಂದೆ ತೀರಿಕೊಂಡಾದ ಆದ ನೋವು ಆಗುತ್ತಿದೆ ಎಂದಿದ್ದಾರೆ.

ಈ ವೇಳೆ ಅವರೊಂದಿಗೆ ಕಾಂಗ್ರೆಸ್ ನಾಯಕಿ ಹಾಗೂ ವಯನಾಡು ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಕೂಡ ಜೊತೆಗಿದ್ದರು.


ಇದು ವಯನಾಡಿಗೆ, ಕೇರಳಕ್ಕೆ ಮತ್ತು ರಾಷ್ಟ್ರಕ್ಕೆ ಭೀಕರ ದುರಂತವಾಗಿದೆ. ನಾವು ಪರಿಸ್ಥಿತಿಯನ್ನು ಅವಲೋಕಿಸುವುದಕ್ಕೆ ಇಲ್ಲಿಗೆ ಬಂದಿದ್ದೇವೆ. ಎಷ್ಟೋ ಜನರು ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದಾರೆ. ಎಷ್ಟೋ ಜನರು ತಮ್ಮ ತಮ್ಮ ಮನೆಗಳನ್ನ ಕಳೆದುಕೊಂಡಿದ್ದಾರೆ. ಅವರಿಗೆ ನಾವು ಸಹಾಯ ಮಾಡಲು ಪ್ರಯತ್ನಿಸುತ್ತೇವೆ. ನನ್ನ ಮಟ್ಟಿಗೆ ಇದು ರಾಷ್ಟ್ರೀಯ ದುರಂತವೇ ಸರಿ. ಇದಕ್ಕೆ ಸರ್ಕಾರ ಏನು ಹೇಳುತ್ತದೆ ನೋಡೋಣ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Join Whatsapp
Exit mobile version