ಗಣರಾಜ್ಯೋತ್ಸವ ಪೆರೇಡ್ ನಲ್ಲಿ ನಾರಾಯಣ ಗುರು ಸ್ಥಬ್ಧ ಚಿತ್ರ ತಿರಸ್ಕರಿಸಿದ್ದು ನೋವು ತಂದಿದೆ: ಕೇಮಾರು ಸ್ವಾಮೀಜಿ

Prasthutha|

ಬೆಂಗಳೂರು: ಗಣರಾಜ್ಯೋತ್ಸವಕ್ಕೆ ನಾರಾಯಣ ಗುರು ಸ್ಥಬ್ಧ ಚಿತ್ರ ತಿರಸ್ಕರಿಸಿದ್ದು ನೋವು ತಂದಿದೆ ಎಂದು ಕೇಮಾರು ಈಶ ವಿಠಲ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -

ಶತಮಾನದ ಹಿಂದಿನಿಂದಲೂ ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು, ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಮಹಾನ್ ಸಂತರ ಸ್ತಬ್ಧಚಿತ್ರಕ್ಕೆ ಅನುಮತಿ ನೀಡಬೇಕು, ಈಗಾಗಲೇ ಅನುಮತಿ ತಿರಸ್ಕರಿಸಿದ ಸಮಿತಿಯು ಕೂಡಲೇ ಈ ಬಗ್ಗೆ ಪುನರ್ ವಿಮರ್ಶಿಸಿ ಕ್ರಮ ಕೈಗೊಳ್ಳಬೇಕೆಂದು ಶ್ರೀಗಳು ಒತ್ತಾಯಿಸಿದ್ದಾರೆ

ಪ್ರತಿ ಬಾರಿಯೂ ರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ದ ಚಿತ್ರಗಳು ಪ್ರದರ್ಶನಗೊಳ್ಳುತ್ತಿದ್ದು, ಈ ಬಾರಿ ಕೇರಳ ರಾಜ್ಯ ಕಳುಹಿಸಿದ ಚಿತ್ರವು ತೀರಸ್ಕೃತಗೊಂಡಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

- Advertisement -

ಕೇರಳದ ಸ್ತಬ್ಧ ಚಿತ್ರದಲ್ಲಿ ಮಹಿಳೆಯರ ಸುರಕ್ಷತೆಯ ವಿಷಯದೊಂದಿಗೆ ಜಟಾಯು ಪಕ್ಷಿ ಹಾಗೂ ಹಿಂದೂ ಧರ್ಮದ ಸುಧಾರಕ ಶ್ರೀ ನಾರಾಯಣ ಗುರುಗಳ ಪ್ರತಿಮೆಯನ್ನು ಸಿದ್ಧಪಡಿಸಲಾಗಿತ್ತು. ಈ ಬಗ್ಗೆ ಪ್ರಶ್ನಿಸಿದ ಕೇಂದ್ರವು, ನಾರಾಯಣ ಗುರುಗಳ ಬದಲಾಗಿ ಶಂಕರಾಚಾರ್ಯರ ಪ್ರತಿಮೆಯ ಬಳಕೆಗೆ ಸೂಚಿಸಿತ್ತು. ಇದಾದ ಬಳಿಕ ಕೇರಳದ ಸ್ತಬ್ದ ಚಿತ್ರಕ್ಕೆ ಅನುಮತಿ ತಿರಸ್ಕರಿಸಲಾಗಿದೆ.

Join Whatsapp