ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರ ಹತ್ಯೆ

Prasthutha|

ಕಲಬುರಗಿ : ಇಲ್ಲಿನ ಕೈಲಾಸ ನಗರದಲ್ಲಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಸೋಮವಾರ ತಡ ರಾತ್ರಿ ಈ ಘಟನೆ ನಡೆದಿದೆ.

ಅಳಂದ ತಾಲೂಕಿನ ಕಡಗಂಚಿ ಗ್ರಾಮ ಪಂಚಾಯತಿ ಸದಸ್ಯ ಶಿವಲಿಂಗಪ್ಪ ಭೂಶೆಟ್ಟಿ ಎಂಬವರು ಮೃತಪಟ್ಟವರು. ಕೆಲ ತಿಂಗಳಿನಿಂದ ಭೂಶೆಟ್ಟಿ ಅವರು ಕಲಬುರಗಿಯ ಕೈಲಾಸ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

- Advertisement -

ಸೋಮವಾರ ತಡ ರಾತ್ರಿ 11 ಗಂಟೆಗೆ ಮನೆ ಸಮೀಪ ನಿಂತುಕೊಂಡಿದ್ದಾಗ ಅಪರಿಚಿತರ ಗುಂಪು ದಾಳಿ ನಡೆಸಿ ಹತ್ಯೆ ಮಾಡಿದೆ.

ಕೊಲೆಗೆ ಕಾರಣ ಗೊತ್ತಾಗಿಲ್ಲ. ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -