ಪಾಂಡವರಕಲ್ಲು: ಎಸ್.ಡಿ.ಪಿ.ಐ 13ನೇ ವರ್ಷದ ಸಂಸ್ಥಾಪನಾ ದಿನಾಚರಣೆ

Prasthutha|

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ  13ನೇ ವರ್ಷದ ಸಂಸ್ಥಾಪನಾ ದಿನದ ಪ್ರಯುಕ್ತ ಎಸ್.ಡಿ.ಪಿ.ಐ ಬಡಗ ಕಜೆಕಾರು ಗ್ರಾಮ ಸಮಿತಿಯ ವತಿಯಿಂದ ಪಾಂಡವರಕಲ್ಲು ಜಂಕ್ಷನ್ ನಲ್ಲಿ ಧ್ವಜಾರೋಹಣಾ ಕಾರ್ಯಕ್ರಮ ನಡೆಸಲಾಯಿತು.

- Advertisement -

ಎಸ್ ಡಿ ಪಿ ಐ ರಾಷ್ಟ್ರೀಯ ನಾಯಕ ರಿಯಾಝ್ ಫರಂಗಿಪೇಟೆ ಧ್ವಜಾರೋಹಣಾಗೈದು, ದಿಕ್ಸೂಚಿ ಭಾಷಣ ಮಾಡಿದರು. ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಶಾಹುಲ್ ಎಸ್ ಹೆಚ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಎಸ್ ಡಿ ಪಿ ಐ ಬಡಗ ಕಜೆಕಾರು ಗ್ರಾಮ ಸಮಿತಿ ಅಧ್ಯಕ್ಷ ಸಾದಿಕ್ ಕೊಮಿನಡ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಮೂನಿಶ್ ಅಲಿ, ಬಡಗ ಕಜೆಕಾರು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಬದ್ರಿಯಾ ಜುಮ್ಮಾ ಮಸೀದಿ ಜಮಾಅತ್ ಅಧ್ಯಕ್ಷ ಅಥಾವುಲ್ಲಾ,  ಮಾಜಿ ಅಧ್ಯಕ್ಷರಾದ ಪುತ್ತುಮೋನು ಕುದುರು, ಜಮಾಅತ್ ಪ್ರಧಾನ ಕಾರ್ಯದರ್ಶಿ ಕೆಪಿ ಉಮರ್ ಮುಸ್ಲಿಯಾರ್, ಜಮಾಅತ್ ಉಪಾಧ್ಯಕ್ಷ ಹಕೀಂ ಕುದುರು , ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಶನ್ ಅಧ್ಯಕ್ಷ ಸಂಶುದ್ದೀನ್ ಸಾಗರ್ ಮತ್ತು ಇತರ ಕಾರ್ಯಕರ್ತರು , ಹಿತೈಷಿಗಳು ಉಪಸ್ಥಿತರಿದ್ದರು.

- Advertisement -

ಇಮ್ರಾನ್ ಪಾಂಡವರಕಲ್ಲು ಕಾರ್ಯಕ್ರಮವನ್ನು ಸ್ವಾಗತಿಸಿ, ನಿರೂಪಿಸಿ, ಧನ್ಯವಾದಗೈದರು.



Join Whatsapp