ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ: 7 ಅಧಿಕಾರಿಗಳು ಎತ್ತಂಗಡಿ

Prasthutha|

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ನಡೆಯುತ್ತಿರುವ ಕುರಿತು ಮಾಹಿತಿ ದೊರಕಿದ ಬೆನ್ನಲ್ಲೇ ಅಲರ್ಟ್ ಆಗಿರುವ ಕಾರಾಗೃಹ ಇಲಾಖೆ 7 ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಜರುಗಿಸಿ ವರ್ಗಾವಣೆ ಮಾಡಿದೆ.

- Advertisement -

ಅಕ್ರಮದ ಕುರಿತು ತನಿಖೆ ನಡೆಸಲು ಎಡಿಜಿಪಿ ಮುರುಗನ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿ ನೀಡಿದ ವರದಿ ಆಧರಿಸಿ 7 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಎನ್.‌ಅಶೋಕ್,ಎಸ್.ಎನ್.ರಮೇಶ್ ,ಶಿವಾನಂದ ಕೆ.ಗಾಣಿಗಾರ್, ಉಮೇಶ್ ಆರ್.ದೊಡ್ಡಮನಿ, ಲೊಕೇಶ್ ಪಿ. ,ಭೀಮಣ್ಣ ದೇವಪ್ಪ ನೆದಲಗಿ,
ಮಹೇಶ್ ಸಿದ್ದನಗೌಡ ಪಾಟೀಲ್, ವರ್ಗಾವಣೆಯಾಗಿರುವ ಅಧಿಕಾರಿಗಳು.

- Advertisement -

ಸಮಿತಿ ತನ್ನ ವರದಿಯಲ್ಲಿ 18 ಮಂದಿ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ‌ ಜರುಗಿಸಲು ಶಿಫಾರಸ್ಸು ಮಾಡಿತ್ತು. ಅದರಲ್ಲಿ ಬೆಂಗಳೂರು ಸೆಂಟ್ರಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ 7 ಅಧಿಕಾರಿಗಳನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ದೊರಕಿದೆ.

Join Whatsapp