Home ಟಾಪ್ ಸುದ್ದಿಗಳು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ: 7 ಅಧಿಕಾರಿಗಳು ಎತ್ತಂಗಡಿ

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ: 7 ಅಧಿಕಾರಿಗಳು ಎತ್ತಂಗಡಿ

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ನಡೆಯುತ್ತಿರುವ ಕುರಿತು ಮಾಹಿತಿ ದೊರಕಿದ ಬೆನ್ನಲ್ಲೇ ಅಲರ್ಟ್ ಆಗಿರುವ ಕಾರಾಗೃಹ ಇಲಾಖೆ 7 ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಜರುಗಿಸಿ ವರ್ಗಾವಣೆ ಮಾಡಿದೆ.

ಅಕ್ರಮದ ಕುರಿತು ತನಿಖೆ ನಡೆಸಲು ಎಡಿಜಿಪಿ ಮುರುಗನ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿ ನೀಡಿದ ವರದಿ ಆಧರಿಸಿ 7 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಎನ್.‌ಅಶೋಕ್,ಎಸ್.ಎನ್.ರಮೇಶ್ ,ಶಿವಾನಂದ ಕೆ.ಗಾಣಿಗಾರ್, ಉಮೇಶ್ ಆರ್.ದೊಡ್ಡಮನಿ, ಲೊಕೇಶ್ ಪಿ. ,ಭೀಮಣ್ಣ ದೇವಪ್ಪ ನೆದಲಗಿ,
ಮಹೇಶ್ ಸಿದ್ದನಗೌಡ ಪಾಟೀಲ್, ವರ್ಗಾವಣೆಯಾಗಿರುವ ಅಧಿಕಾರಿಗಳು.

ಸಮಿತಿ ತನ್ನ ವರದಿಯಲ್ಲಿ 18 ಮಂದಿ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ‌ ಜರುಗಿಸಲು ಶಿಫಾರಸ್ಸು ಮಾಡಿತ್ತು. ಅದರಲ್ಲಿ ಬೆಂಗಳೂರು ಸೆಂಟ್ರಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ 7 ಅಧಿಕಾರಿಗಳನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ದೊರಕಿದೆ.

Join Whatsapp
Exit mobile version