ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ಪ್ರಕರಣ: ಸಿಸಿಬಿ ತನಿಖೆಗೆ ಸರ್ಕಾರ ಆದೇಶ

Prasthutha|

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಆರೋಪಿಯಾಗಿ ಜೈಲು ಸೇರಿದ ದರ್ಶನ್​ ಹಾಗೂ ಇತರರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.

- Advertisement -

ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತಗೆ ಆದೇಶ ನೀಡಲಾಗಿದೆ.

ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿಯನ್ನು ನೇರವಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. ಆ ಮೂಲಕ ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

- Advertisement -

ವಿಚಾರಣಾಧೀನ ಖೈದಿ ಆಗಿರುವ ದರ್ಶನ್​ ಅವರು ಪರಪ್ಪನ ಅಗ್ರಹಾರದಲ್ಲಿ ಇರುವ ರೌಡಿಶೀಟರ್​ಗಳ ಜೊತೆ ಹಾಯಾಗಿ ಕುಳಿತು ಸಿಗರೇಟ್​ ಸೇದುತ್ತಾ, ಕಾಫಿ ಕುಡಿದ ಫೋಟೋ ವೈರಲ್​ ಆಯಿತು. ಅಲ್ಲದೇ, ಜೈಲಿನ ಹೊರಗೆ ಇರುವ ರೌಡಿಗಳ ಜೊತೆ ವಿಡಿಯೋ ಕಾಲ್​ನಲ್ಲಿ ದರ್ಶನ್​ ಮಾತನಾಡಿರುವುದು ಕೂಡ ಬಳಕಿಗೆ ಬಂದಿದೆ.



Join Whatsapp
Exit mobile version