ಪ್ರೀತಿಗೆ ಪೋಷಕರ ವಿರೋಧ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು

Prasthutha|

ಮೈಸೂರು: ಪೋಷಕರ ವಿರೋಧದಿಂದ ನೊಂದು ನಂಜನಗೂಡು ಬಳಿಯ ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳನ್ನು ತೆಪ್ಪ ನಡೆಸುವ ಅಂಬಿಗರು ರಕ್ಷಿಸಿದ್ದಾರೆ.
ರಕ್ಷಿಸಿರುವ ಪ್ರೇಮಿಗಳನ್ನು ನಂಜನಗೂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -


ಚಾಮರಾಜನಗರದ 17 ವರ್ಷದ ಅಪ್ರಾಪ್ತೆ ಹಾಗೂ ಸೋಮವಾರಪೇಟೆ ಅಭಿ (19) ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು. ಅಪ್ರಾಪ್ತೆ ಚಾಮರಾಜನಗರ ಕಾಲೇಜೊಂದರ ವಿದ್ಯಾರ್ಥಿನಿಯಾಗಿದ್ದು, ಅಭಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಾನೆ.


ಇಬ್ಬರ ಪ್ರೀತಿ-ಪ್ರೇಮದ ವಿಚಾರ ತಿಳಿದ ಬಾಲಕಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದ್ದಾರೆ. ಇದೇ ವೇಳೆ ತೆಪ್ಪ ನಡೆಸುತ್ತಿದ್ದ ಅಂಬಿಗರು ಇಬ್ಬರನ್ನೂ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp