Home ಟಾಪ್ ಸುದ್ದಿಗಳು ಪ್ರೀತಿಗೆ ಪೋಷಕರ ವಿರೋಧ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು

ಪ್ರೀತಿಗೆ ಪೋಷಕರ ವಿರೋಧ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು

ಮೈಸೂರು: ಪೋಷಕರ ವಿರೋಧದಿಂದ ನೊಂದು ನಂಜನಗೂಡು ಬಳಿಯ ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳನ್ನು ತೆಪ್ಪ ನಡೆಸುವ ಅಂಬಿಗರು ರಕ್ಷಿಸಿದ್ದಾರೆ.
ರಕ್ಷಿಸಿರುವ ಪ್ರೇಮಿಗಳನ್ನು ನಂಜನಗೂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಚಾಮರಾಜನಗರದ 17 ವರ್ಷದ ಅಪ್ರಾಪ್ತೆ ಹಾಗೂ ಸೋಮವಾರಪೇಟೆ ಅಭಿ (19) ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು. ಅಪ್ರಾಪ್ತೆ ಚಾಮರಾಜನಗರ ಕಾಲೇಜೊಂದರ ವಿದ್ಯಾರ್ಥಿನಿಯಾಗಿದ್ದು, ಅಭಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಾನೆ.


ಇಬ್ಬರ ಪ್ರೀತಿ-ಪ್ರೇಮದ ವಿಚಾರ ತಿಳಿದ ಬಾಲಕಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದ್ದಾರೆ. ಇದೇ ವೇಳೆ ತೆಪ್ಪ ನಡೆಸುತ್ತಿದ್ದ ಅಂಬಿಗರು ಇಬ್ಬರನ್ನೂ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version