Home ರಾಜ್ಯ ಪರೇಶ್ ಮೇಸ್ತಾ ಸಾವು ಪ್ರಕರಣ | ʼಇದು ಕೊಲೆಯಲ್ಲ, ಆಕಸ್ಮಿಕ ಸಾವು ʼ :- ಸಿ...

ಪರೇಶ್ ಮೇಸ್ತಾ ಸಾವು ಪ್ರಕರಣ | ʼಇದು ಕೊಲೆಯಲ್ಲ, ಆಕಸ್ಮಿಕ ಸಾವು ʼ :- ಸಿ ಬಿ ಐ ವರದಿ

ಕಾರವಾರ : ಉತ್ತರ ಕನ್ನಡ  ಜಿಲ್ಲೆಯ ಹೊನ್ನಾವರದಲ್ಲಿ ಕಳೆದ ಐದು ವರ್ಷಗಳ ಹಿಂದೆ ಸಂಶಯಾಸ್ಪದವಾಗಿ ಸಾವಿಗೀಡಾಗಿದ್ದ  ಪರೇಶ್ ಮೇಸ್ತಾ  ಎಂಬ ಯುವಕನನ್ನು ಯಾರೂ ಕೊಲೆ ಮಾಡಿಲ್ಲ.ಅದು ಆಕಸ್ಮಿಕ ಸಾವು ಎಂದು  ಸಿಬಿಐ, ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರನಾಗಿದ್ದ  ಯುವಕ ಪರೇಶ್ ಮೇಸ್ತಾ ಕಣ್ಮರೆಯಾಗಿದ್ದು,  ಎರಡು ದಿನದ ಬಳಿಕ ನಗರದ ದೇವಸ್ತಾನವೊಂದರ  ಹಿಂಭಾಗದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ.

ಈ ಯುವಕನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿಗರು ಆರೋಪಿಸಿದ್ದರು. ಮೇಸ್ತಾನನ್ನು ಬಿಜೆಪಿ, ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರು. ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ಈ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಐವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಸುದೀರ್ಘ ತನಿಖೆ ನಡೆಸಿ ನಾಲ್ಕೂವರೆ ವರ್ಷದ ನಂತರ ಸಿಬಿಐ, ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.

ಸಿಬಿಐ ವರದಿಯಲ್ಲಿ, ಪರೇಶ್ ಮೇಸ್ತಾನನ್ನು ಯಾರೂ ಹತ್ಯೆ ನಡೆಸಿಲ್ಲ.. ಇದೊಂದು ಆಕಸ್ಮಿಕ ಸಾವು ಎಂದು ತಿಳಿಸಲಾಗಿದೆ.  ಇಂದು ಸಿಬಿಐ ಸಲ್ಲಿಸಿರುವ ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ, ನವೆಂಬರ್ 16ಕ್ಕೆ ತೀರ್ಪು ಕಾಯ್ದಿರಿಸಿದೆ.

Join Whatsapp
Exit mobile version