ರಾಹುಲ್ ಗಾಂಧಿ ಒಬ್ಬ ಹುಚ್ಚ ಇದ್ದಂತೆ, ಪಾರ್ಲಿಮೆಂಟ್’ನ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು: ಭರತ್ ಶೆಟ್ಟಿ ವಿವಾದಾತ್ಮಕ ಹೇಳಿಕೆ

Prasthutha|

ಮಂಗಳೂರು: ರಾಹುಲ್ ಗಾಂಧಿ ಒಬ್ಬ ಹುಚ್ಚ ಇದ್ದಂತೆ, ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ ಎಂದು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

- Advertisement -

ಮಂಗಳೂರಿನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ ಯಾರಾದರೂ ಎರಡು ಕೆನ್ನೆಗೆ ಬಾರಿಸಬೇಕು ಅನಿಸ್ತಾ ಇದೆ. ಆಗ ಇದಕ್ಕೆ ಏಳೆಂಟು ಎಫ್ ಐಆರ್ ಆಗುತ್ತಿತ್ತು ಅಷ್ಟೇ. ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗುತ್ತಾನೆ ಅಂತ ಗೊತ್ತಿಲ್ಲ. ಅವನು ಹಿಂದೂ ವಿರೋಧಿ ನೀತಿಯನ್ನು ಅಳವಡಿಸಿಕೊಂಡಿದ್ದಾನೆ ಎಂದು ನಾಲಗೆ ಹರಿಯಬಿಟ್ಟಿದ್ದಾರೆ.


ರಾಹುಲ್ ಗಾಂಧಿ ಒಬ್ಬ ದೊಡ್ಡ ಹುಚ್ಚ ಅನ್ನೋದು ಸ್ಪಷ್ಟ. ಹಿಂದೂಗಳ ಬಗ್ಗೆ ಏನು ಮಾತನಾಡಿದ್ರೂ ಕೇಳ್ತಾರೆ ಎಂಬ ಭಾವನೆ ರಾಹುಲ್ ಗಾಂಧಿಗೆ ಇರಬಹುದು. ಅವನು ಅಲ್ಲಿ ಬೊಗಳುವ ಸಂದರ್ಭ ಇಲ್ಲಿನ ಸ್ಥಳೀಯ ನಾಯಕರು ಬಾಲ ಬಿಚ್ಚಲು ಶುರು ಮಾಡಿದ್ದಾರೆ ಎಂದು ಹೇಳಿದರು.

- Advertisement -

ಪೇಜಾವರ ಸ್ವಾಮೀಜಿ ಹೇಳಿಕೆಯನ್ನು ವಿರೋಧಿಸಿ ಸ್ಥಳೀಯ ನಾಯಕರು ಹೇಳಿಕೆ ಕೊಟ್ಟಿದ್ದಾರೆ. ಹಿಂದೂ ಮತ್ತು ಹಿಂದುತ್ವ ಬೇರೆ ಬೇರೆ ಎಂಬ ಥಿಯರಿ ಹೇಳೋದಕ್ಕೆ ಹೊರಟಿದ್ದಾರೆ. 99 ಸೀಟು ಹಿಡಿದುಕೊಂಡು ಏನೋ ಸಾಧನೆ ಮಾಡಿದವನ ಹಾಗೆ ಮಾತಾಡುತ್ತಿದ್ದಾನೆ. ಶಿವಾಜಿ, ರಾಣಾ ಪ್ರತಾಪ್ ನಮ್ಮ ಸಮಾಜದಲ್ಲೇ ಹುಟ್ಟಿದವರು, ಎಲ್ಲಿ ಶಸ್ತ್ರ ತೆಗಿಬೇಕೋ ಅಲ್ಲಿ ತೆಗೀತೇವೆ. ಶಸ್ತ್ರ ಪೂಜೆ ಮಾಡಿ ಉತ್ತರ ಕೊಡೋದಕ್ಕೂ ನಮಗೆ ಗೊತ್ತಿದೆ. ಅವನು ಕೇರಳಕ್ಕೆ ಬಂದಾಗ ಸೆಕ್ಯುಲರ್,ತಮಿಳುನಾಡಿಗೆ ಹೋದಾಗ ನಾಸ್ತಿಕ ಆಗ್ತಾನೆ, ಗುಜರಾತ್ ಭಾಗಕ್ಕೆ ಹೋದಾಗ ಶಿವಭಕ್ತನಾಗುತ್ತಾನೆ. ಅಂತಹ ದೊಡ್ಡ ಹುಚ್ಚ ರಾಹುಲ್ ಗಾಂಧಿ ಎಂದು ಹೇಳಿದ್ದಾರೆ.



Join Whatsapp