ಪಠಾಣ್ ಚಿತ್ರ ವಿವಾದ | ಇನ್ನೂ ಎಷ್ಟು ದಿನ ಅಂಧಭಕ್ತರನ್ನು ಸಹಿಸಿಕೊಳ್ಳಬೇಕು?: ಪ್ರಕಾಶ್ ರಾಜ್ ಟ್ವೀಟ್

Prasthutha|

ನವದೆಹಲಿ: ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಪಠಾಣ್’ ಚಿತ್ರದ ‘ಬೇಷರಂ ರಂಗ್’ ಹಾಡಿನಲ್ಲಿ ಕೇಸರಿ ಬಟ್ಟೆ ಹಾಕಿರುವುದನ್ನು ಮುಂದಿಟ್ಟು ಸಂಘಪರಿವಾರ ವಿವಾದ ಸೃಷ್ಟಿಸಿದ್ದು, ಇನ್ನೂ ಎಷ್ಟು ದಿನ ನಾವು ಇಂತಹ ಅಂಧಭಕ್ತರನ್ನು ಸಹಿಸಿಕೊಳ್ಳಬೇಕು? ಎಂದು ಖ್ಯಾತ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ.

- Advertisement -


ನಿನ್ನೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು, ಬೇಷರಂ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರ ವೇಷಭೂಷಣಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ನರೋತ್ತಮ್ ಮಿಶ್ರಾ ಅವರ ಹೇಳಿಕೆಯನ್ನು ಉಲ್ಲೇಖಿಸಿ ವಿರೋಧ ವ್ಯಕ್ತಪಡಿಸಿರುವ ನಟ ಪ್ರಕಾಶ್ ರಾಜ್, ಇನ್ನೂ ಎಷ್ಟು ದಿನ ನಾವು ಇಂತಹ ಅಂಧಭಕ್ತರನ್ನು ಸಹಿಸಿಕೊಳ್ಳಬೇಕು? ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.


ಕೇಸರಿ ವಸ್ತ್ರಧಾರಿಗಳು ಅತ್ಯಾಚಾರ, ದ್ವೇಷ ಭಾಷಣ, ರಾಜಕೀಯ ನಾಯಕರು ಭ್ರಷ್ಟಾಚಾರ, ದಂಧೆ ನಡೆಸಿದರೂ ಪರವಾಗಿಲ್ಲ. ಸಿನಿಮಾದಲ್ಲಿ ಕೇಸರಿ ಬಟ್ಟೆ ಬಳಸಿದರೆ ತಪ್ಪೇ? ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

Join Whatsapp
Exit mobile version