ಅನ್ನಭಾಗ್ಯದ 5 ಕೆಜಿ ಅಕ್ಕಿಯ ಹಣ ನೀಡುವುದು ಮುಂದುವರಿಕೆ

Prasthutha|

►ಸಚಿವ ಸಂಪುಟದ ತೀರ್ಮಾನಗಳು ಇಲ್ಲಿವೆ

- Advertisement -

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಗುರುವಾರ ನಡೆದಿದ್ದು, ಮಹದಾಯಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.

ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು

- Advertisement -

ಅನ್ನಭಾಗ್ಯ ಯೋಜನೆ ಅಡಿ 5k.g ಅಕ್ಕಿಯ ಹಣವನ್ನ ನೀಡುವ ಯೋಜನೆ ಮುಂದುವರೆಸಲು ನಿರ್ಧಾರ(ವ್ಯಕ್ತಿಗೆ 170 ರೂ ಹಣವನ್ನ ನೀಡಲಿರೋ ಸರ್ಕಾರ).

ರಾಜ್ಯದ ಒಳಾಡಳಿತ ಇಲಾಖೆ 59 ಜನ ಕೈದಿಗಳ ಸನ್ನಡತೆ ಆಧಾರದ ಮೇಲೆ ಅವಧಿ ಮುನ್ನ ಬಿಡುಗಡೆಗೆ ನಿರ್ಧಾರ.

ವಸತಿ ಇಲಾಖೆಯಲ್ಲಿ ಬೆಟ್ಟಗೇರಿಯಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ.

ಕಾರ್ಮಿಕ ಇಲಾಖೆಯ ಬಳಕೆದಾರರಿಂದ ಸಂಗ್ರಹಿಸುವ, ಕಾನೂನು ಇಲಾಖೆ ಅಡಿ ಬರುವ ಎಂಟು ಕಾಯ್ಡೆ ಅಡಿ, ಬಳಕೆ‌ದಾರರಿಂದ ಸಂಗ್ರಹಿಸುವ ದಂಡವನ್ನ‌ 30% ಹೆಚ್ಚಳಕ್ಕೆ‌ ನಿರ್ಧಾರ.

ಕಾನೂನು ಸೇವಾ ತಿದ್ದುಪಡಿ ಕರಡು ನಿಯಮಗಳಿಗೆ 15 ದಿನ ಅವಕಾಶ ನೀಡುವುದು, ಆಕ್ಷೇಪಣೆ ಬಾರದಿದ್ರೆ ಸದರಿ ಕರಡು ನಿಯಮ ಮಂಡಿಸದೆ ನಿರ್ಣಯ ತೆಗೆದುಕೊಳ್ಳಲು ಅನುಮೋದನೆ.

ವೈದ್ಯಕೀಯ ಶಿಕ್ಷಣ ಇಲಾಖೆ, ಕಿಮ್ಸ್ ಆಸ್ಪತ್ರೆಗೆ ಸಲಕರಣೆ ಖರೀದಿಗೆ 75 ಕೋಟಿ ಅನುದಾನ ನೀಡಲು ಅನುಮೋದನೆ.

ಮೈಸೂರಿನ ನೆಫ್ರೋಲಜಿ ನೂರು ಬೆಡ್ ಸಾಮರ್ಥ್ಯ ಹೆಚ್ಚಳಕ್ಕೆ ಅನುಮೋದನೆ.
ಕಲಬುರಗಿಯ ಮಕ್ಕಳ ಆಸ್ಪತ್ರೆಯನ್ನ ಇಂದಿರಾಗಾಂಧಿ ಆಸ್ಪತ್ರೆ ಸಹಯೋಗದಲ್ಲಿ 150 ಹಾಸಿಗೆ ಆಸ್ಪತ್ರೆ ಸ್ಥಾಪನೆಗೆ 221 ಕೋಟಿ ಬಿಡುಗಡೆಗೆ ಅನುಮೋದನೆ.

ಬೆಂಗಳೂರು ನೆಪ್ರೋ- ಯುರಾಲಜಿ ಆಸ್ಪತ್ರೆಯ ಹೊರ ರೋಗಿಗಗಳ ವಿಭಾಗಗಕ್ಕೆ ನೂತನ ಕಟ್ಟಡಕ್ಕೆ 16.15 ಕೋಟಿಗೆ ಅನುಮೋದನೆ.
ಕಂದಾಯ ಇಲಾಖೆಯ ಸಹಾಯಕ ಉಪನೋಂದಣ ಅಧಿಕಾರಿ ವರ್ಗಾವಣೆ ಅವಧಿಯನ್ನು 30-09-24ರ ವರೆಗೂ ವಿಸ್ತರಣೆಗೆ ಅನುಮೋದನೆ.

ಸ್ವಸಹಾಯ ಗುಂಪಿನ ಮಹಿಳೆಯರಿಗೆ ಹೊಸ ಉದ್ಯೋಗ ಅವಕಾಶ ಒಂದು ಲಕ್ಷ ಮಹಿಳೆಯರಿಗೆ 2500 ಕಾಫಿ ಕಿಯೋಸ್ಕ್‌ಗಳನ್ನ ಒದಗಿಸಲು ಕ್ರಮ 25 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ.

ಆಹಾರ ಇಲಾಖೆ ಇಂದ ಪಡಿತರ ಫಲಾನುಭವಿಗಳಿಗೆ ಹಣದ ಬದಲು, ಆಹಾರ ನೀಡುವ ಚಿಂತನೆ ಇತ್ತು.. DBT ಮೂಲಕ ಹಣವನ್ನ ಮುಂದುವರೆಸಲು ನಿರ್ಧಾರ



Join Whatsapp