ಸಂಚಾರ ಉಲ್ಲಂಘನೆ ದಂಡ ಪಾವತಿ: ನಾಳೆಯಿಂದ ಮತ್ತೆ 11 ದಿನ ರಿಯಾಯಿತಿ

Prasthutha|

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.

- Advertisement -


ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ದಂಡ ಪಾವತಿಸಲು ಶೇ. 50ರ ರಿಯಾಯಿತಿ ನೀಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಅಂಥದ್ದೇ ಅವಕಾಶ ನೀಡಿದೆ. ಶೇ. 50ರಷ್ಟು ದಂಡ ಪಾವತಿಗೆ ನಾಳೆ (ಮಾ. 4) ಯಿಂದ 15 ದಿನಗಳ ಕಾಲಾವಕಾಶ ನೀಡಿದೆ.


ಷರತ್ತು ಅನ್ವಯ
11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್’ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

- Advertisement -


ಕಳೆದ 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ. ಈ ರಿಯಾಯಿತಿಯು ಶನಿವಾರದಿಂದ (ಮಾರ್ಚ್ 4) 15 ದಿನಗಳವರೆಗೆ ಇತ್ಯರ್ಥಪಡಿಸಿಕೊಂಡು ದಂಡ ಪಾವತಿಸುವ ಪ್ರಕರಣಗಳಿಗೆ ಮಾತ್ರ ದೊರಕಲಿದೆ. ಕಾನೂನು ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸಹಮತಿ ಪಡೆದು ಈ ಆದೇಶ ಹೊರಡಿಸಲಾಗುತ್ತಿದೆ ಎಂದು ಸಾರಿಗೆ ಇಲಾಖೆ ಆದೇಶದಲ್ಲಿ ತಿಳಿಸಿದೆ.


ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಕೆಲವಲು ದಂಡಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು.


ಎಲ್ಲೆಲ್ಲಿ ಪಾವತಿ:
ಕರ್ನಾಟಕ ಒನ್ ವೆಬ್’ಸೈಟ್’ನಲ್ಲಿ ವಿವರಗಳನ್ನು ಪಡೆದು ದಂಡ ಪಾವತಿಸಬಹುದಾಗಿದೆ. ಪೇಟಿಎಂ ಆ್ಯಪ್ ಮೂಲಕವೂ ನಿಯಮ ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ. ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ದಂಡ ಪಾವತಿಸಿ ರಶೀದಿಯನ್ನು ಪಡೆದುಕೊಳ್ಳಬಹುದಾಗಿದೆ.

Join Whatsapp