ಬಾಣಂತಿ ನಿಧನ: ಆಸ್ಪತ್ರೆಯ ಎರಡು ಲಕ್ಷ ರೂ. ಬಿಲ್ ಪಾವತಿ ಮಾಡಿದ ಸಚಿವ ಝಮೀರ್ ಅಹಮದ್

Prasthutha|

ಬೆಂಗಳೂರು: ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯ ವೈದ್ಯಕೀಯ ವೆಚ್ಚವನ್ನು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಪಾವತಿ ಮಾಡಿದ್ದಾರೆ.
ಚಿಕ್ಕನಾಯಕನಹಳ್ಳಿ ಹುಳಿಯಾರು ಪಾಳ್ಯದ ಹಣ್ಣಿನ ವ್ಯಾಪಾರಿ ಜಬಿವುಲ್ಲಾ ಎಂಬುವರ ಪತ್ನಿ ಮೂವತ್ತು ವರ್ಷದ ಫಾತಿಮಾಬಿ ಎಂಬುವರು ತಿಪಟೂರು ಆಸ್ಪತ್ರೆಗೆ ದಾಖಲಾಗಿದ್ದರು. ಆ ನಂತರ ಬೆಂಗಳೂರಿಗೆ ಚಿಕಿತ್ಸೆಗೆ ಬಂದಿದ್ದ ಅವರು ಜೆಪಿ ನಗರದ ಕ್ಷೇಮ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

- Advertisement -


ನಂತರ ಅನಾರೋಗ್ಯ ಕಾಣಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದರು. ಮೃತದೇಹ ತೆಗೆದುಕೊಂಡು ಹೋಗಲು 3 ಲಕ್ಷ ರೂ. ಪಾವತಿಸಬೇಕಿತ್ತು. ಪತಿ ಹಣ ಪಾವತಿ ಮಾಡಲು ಆಗದೆ ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಜಮೀರ್ ಅಹಮದ್ ಎರಡು ಲಕ್ಷ ರೂ. ಪಾವತಿ ಮಾಡಿ ಮೃತದೇಹ ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲು ಆಂಬುಲೆನ್ಸ್ ವ್ಯವಸ್ಥೆ ಮಾಡಿಸಿದರು.



Join Whatsapp