ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ನವಿಲು ಗರಿಗೆ ವಿನಾಯಿತಿ ಇದೆ: ಸಚಿವ ಈಶ್ವರ್ ಖಂಡ್ರೆ

Prasthutha|

ಬೆಂಗಳೂರು: 1972ರ ಸೆಕ್ಷನ್ 43ರ ಅಡಿ ನವಿಲು ಗರಿಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

- Advertisement -


ನವಿಲು ಗರಿಗಳಿಂದ ತಯಾರಿಸಿದ ಯಾವುದೇ ವಸ್ತುಗಳನ್ನು ರಫ್ತು ಮಾಡುವುದನ್ನು ಭಾರತ ಸರ್ಕಾರ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದಗಳಲ್ಲಿ ಅಂತಾರಾಷ್ಟ್ರೀಯ ವ್ಯಾಪಾರದ ಸಮಾವೇಶ – ಸಿಐಟಿಇಎಸ್ ನಿಷೇಧಿಸಿದೆ. ಆದರೆ ನೈಸರ್ಗಿಕವಾಗಿ ನವಿಲುಗಳಿಂದ ಉದುರಿದ ಗರಿಗಳನ್ನು ಸಂಗ್ರಹಿಸುವುದು ಮತ್ತು ದೇಶದೊಳಗೆ ಮಾರಾಟ ಮಾಡುವುದು ಕಾನೂನುಬಾಹಿರವಲ್ಲ. ಆದರೆ, ನವಿಲುಗಳಿಗೆ ಹಿಂಸೆ ನೀಡಿ ಗರಿ ಕಿತ್ತರೆ ಅದು ಶಿಕ್ಷಾರ್ಹ ಅಪರಾಧ ಎಂದು ಸ್ಪಷ್ಟಪಡಿಸಿದ್ದಾರೆ.



Join Whatsapp