ಪೆಗಾಸೆಸ್ ಕಣ್ಗಾವಲು ಹಗರಣ: ಸ್ವತಂತ್ರ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

Prasthutha|

ನವದೆಹಲಿ: ಪೆಗಾಸೆಸ್ ಕಣ್ಗಾವಲು ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಮ್ ಕೋರ್ಟ್ ನೂತನ ತಾಂತ್ರಿಕ ಸಮಿತಿಯೊಂದನ್ನು ರಚಿಸಿದ್ದು, ಮುಂದಿನ ವಾರದಿಂದ ಸ್ವತಂತ್ರವಾಗಿ ತನಿಖೆ ನಡೆಸಿ ವರದಿ ಒಪ್ಪಿಸುವಂತೆ ಸುಪ್ರೀಮ್ ಕೋರ್ಟ್ ಆದೇಶಿಸಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಪ್ರಕರಣದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡು ವಕೀಲರ ವಾದವನ್ನು ಆಲಿಸಿದರು.

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುತ್ತಾ ತಾಂತ್ರಿಕ ಸಮಿತಿಯ ಕೆಲವು ಸದಸ್ಯರ ವೈಯಕ್ತಿಕ ಕಾರಣದಿಂದಾಗಿ ಗೈರುಹಾಜರಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ವಾರದಿಂದ ಸ್ವತಂತ್ರ ತನಿಖೆಯ ಆದೇಶವನ್ನು ಕಾಯ್ದಿರಿಸಲಾಗುವುದೆಂದು ಅವರು ತಿಳಿಸಿದ್ದಾರೆ.

Join Whatsapp