ಕರ್ನಾಟಕದ ರಾಯಚೂರನ್ನು ತೆಲಂಗಾಣಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಕೆಸಿಆರ್ ರಿಂದ ಹೊಸ ವಿವಾದ

Prasthutha|

ಅಮರಾವತಿ: ನಮ್ಮ ರಾಜ್ಯದ ಅಭಿವೃದ್ಧಿಗೆ ಜನರು ಆಕರ್ಷಿತರಾಗಿ ಕರ್ನಾಟಕದ ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದರು.

- Advertisement -

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕರ್ನಾಟಕದೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ಗಡಿ ಪ್ರದೇಶವಾದ ತಾಂಡೂರಿಗೆ ರಾಯಚೂರಿನ ಜನರು ಹತ್ತಿರದಲ್ಲಿದ್ದೀರಿ. ಈ ಹಿನ್ನೆಲೆಯಲ್ಲಿ ರಾಯಚೂರಿನ ಕೆಲವು ಗಡಿ ಭಾಗದ ಜನರು ತಮ್ಮನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇಲ್ಲದಿದ್ದರೆ ನಮ್ಮ ರಾಜ್ಯದಲ್ಲಿ ಜಾರಿಗೆ ತಂದಿರುವ ರೀತಿಯ ಯೋಜನೆಗಳನ್ನು ಕರ್ನಾಟಕದಲ್ಲಿ ಒದಗಿಸಬೇಕು ಎಂದು ಹೇಳಬೇಕು ಎಂದರು.

Join Whatsapp