Home ಟಾಪ್ ಸುದ್ದಿಗಳು ಜೆಡಿಎಸ್ ಪಕ್ಷವನ್ನು ನಾಶ ಮಾಡುತ್ತೀವಿ ಎಂದವರಿಗೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಜೆಡಿಎಸ್ ಪಕ್ಷವನ್ನು ನಾಶ ಮಾಡುತ್ತೀವಿ ಎಂದವರಿಗೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಮಂಡ್ಯ ಲೋಕಸಭಾ ರಣರಂಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ವಿರುದ್ಧ ಕಣಕ್ಕಿಳಿದಿದ್ದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.

ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮತದಾರರಿಗೆ, ಜೆಡಿಎಸ್-ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರು ಸಾಕಷ್ಟು ಶ್ರಮಪಟ್ಟಿದ್ದಾರೆ. ಅವರಿಗೆ ವೈಯಕ್ರಿಕ ಧನ್ಯವಾದಗಳನ್ನು ತಿಳಿಸುತ್ತೇನೆ. ದೇಶದಲ್ಲಿ ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.


ಎಕ್ಸಿಟ್ ಪೋಲ್ ನ ಫಲಿತಾಂಶಕ್ಕಿಂತ ಸ್ವಲ್ಪ ಏರುಪೇರಾಗಿದೆ. ನಾವು 25ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಬೇಕಿತ್ತು. ಆದರೆ ಪ್ರಧಾನಿ ಮೋದಿ ಅವರನ್ನು ಅತಿಯಾಗಿ ಅವಲಂಭಿಸಿ, ಸ್ವಲ್ಪ ಓವರ್ ಕಾನ್ಫಿಡೆನ್ಸ್ನಿಂದ ಮೈಮರೆತಿದ್ದೇವು. ಜತೆಗೆ ವಿರೋಧ ಪಕ್ಷಗಳು ಮತ್ತು ಕಾಣದ ಕೈಗಳು ಮಾಡಿರುವ ಅಪಪ್ರಚಾರವು ಸ್ವಲ್ಪ ಸೀಟು ಕಡಿಮೆಯಾಗಲು ಕಾರಣವಾಗಿದೆ ಎಂದು ಹೇಳಿದ್ದಾರೆ.

Join Whatsapp
Exit mobile version