Home ಟಾಪ್ ಸುದ್ದಿಗಳು ರಾಜ್ಯದ ಜನ ಕೋಮುವಾದಿಗಳನ್ನು ದೂರವಿಟ್ಟು ಕಾಂಗ್ರೆಸ್’ಗೆ ಅಧಿಕಾರ ನೀಡಿದ್ದಾರೆ: ರೇವಣ್ಣ

ರಾಜ್ಯದ ಜನ ಕೋಮುವಾದಿಗಳನ್ನು ದೂರವಿಟ್ಟು ಕಾಂಗ್ರೆಸ್’ಗೆ ಅಧಿಕಾರ ನೀಡಿದ್ದಾರೆ: ರೇವಣ್ಣ

ಹಾಸನ: ರಾಜ್ಯದ ಜನರು ಕೋಮುವಾದಿಗಳನ್ನು ದೂರವಿಟ್ಟು ಕಾಂಗ್ರೆಸ್ ಗೆ ಅಧಿಕಾರ ನೀಡಿದ್ದಾರೆ. ಕಾಂಗ್ರೆಸ್ ಒಳ್ಳೆಯ ಆಡಳಿತ ನೀಡಿ, ಗ್ಯಾರಂಟಿಗಳನ್ನು ಈಡೇರಿಸಲಿ ಎಂದು ಜೆಡಿಎಸ್ ನಾಯಕ ಹೆಚ್.ಡಿ ರೇವಣ್ಣ ಹೇಳಿದ್ದಾರೆ.


ಚುನಾವಣಾ ಫಲಿತಾಂಶದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷದ ಸೋಲನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸುತ್ತೇವೆ. 2 ರಾಷ್ಟ್ರೀಯ ಪಕ್ಷಗಳನ್ನು ಜೆಡಿಎಸ್ ಮುಗಿಸಲು ಪ್ರಯತ್ನಿಸಿದವು. ಆದರೆ ಜನರು ನಮ್ಮ ಪಕ್ಷವನ್ನು ಉಳಿಸಿಕೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ನಮ್ಮ ಪಕ್ಷದ ನಾಲ್ವರು ಗೆದ್ದಿದ್ದೇವೆ, ಮೂವರು ಸೋತಿದ್ದಾರೆ. ನಮಗೆ ಮತ ನೀಡಿದ ಎಲ್ಲರಿಗು ಧನ್ಯವಾದ. ರಾಷ್ಟ್ರೀಯ ಪಕ್ಷಗಳ ಮುಖಂಡರೇ ಸೊತಿರುವಾಗ ನಮ್ಮದೇನಿದೆ. ಕೆಲ ನಾಯಕರು ನಮ್ಮನ್ನು ಮುಗಿಸಬೇಕು ಎಂದು ನಾಲ್ಕು ವರ್ಷರಿಂದ ಹೋರಾಟ ಮಾಡಿದರು ಎಂದರು.

Join Whatsapp
Exit mobile version