ಮಕ್ಕಳ ಕಳ್ಳರೆಂದು ಭಾವಿಸಿ ಪ್ರಯಾಣಿಕರ ಕಾರಿಗೆ ಬೆಂಕಿ ಹಚ್ಚಿದ ಗ್ರಾಮಸ್ಥರು!

Prasthutha|

ಬಾಗಲಕೋಟೆ: ಮಕ್ಕಳ‌ ಕಳ್ಳರೆಂದು ಭಾವಿಸಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರನ್ನು ಬೆನ್ನಟ್ಟಿದ ಗ್ರಾಮಸ್ಥರು ಬಳಿಕ ಕಾರಿಗೆ ಬೆಂಕಿ ಹಚ್ಚಿದ ಘಟನೆ ತಾಲ್ಲೂಕಿನ ಖಜ್ಜಿಡೋಣಿ ಗ್ರಾಮದಲ್ಲಿ ನಡೆದಿದೆ.

- Advertisement -

ಕಾರಿನಲ್ಲಿರುವ ಪ್ರಯಾಣಿಕರು ಮಕ್ಕಳ ಕಳ್ಳರೆಂದು ಭಾವಿಸಿ ಜನರು ಚಿಕ್ಕೂರು ಗ್ರಾಮದಿಂದ ಚೇಸ್ ಮಾಡಲು ಆರಂಭಿಸಿದ್ದಾರೆ. ಈ ವೇಳೆ ಕಾರು ವೇಗವಾಗಿ ಖಜ್ಜಿಡೋಣಿ ಗ್ರಾಮದ ಕಡೆ ಬಂದಿದೆ. ಆದರೂ ಬೆನ್ನುಬಿಡಿದ ಜನರು ಕಾರನ್ನು ತಡೆದು ಪ್ರಶ್ನಿಸಿದ್ದಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಕಾರಿಗೆ ಬೆಂಕಿ ಹಚ್ಚಿದ್ದು, ಸುಟ್ಟು ಕರಕಲಾಗಿದೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಲೋಕಾಪುರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

Join Whatsapp