Home ಟಾಪ್ ಸುದ್ದಿಗಳು ಗ್ಯಾರಂಟಿ ಯೋಜನೆಯಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಯಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಯೋಜನೆಯಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಹಿಂದುಳಿದ ವರ್ಗಗಳ ಒಕ್ಕೂಟದ ವಿದ್ಯಾರ್ಥಿನಿಲಯ ಮತ್ತು ಸಮುದಾಯ ಭವನದ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಸರ್ವರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಈ ಆಶಯಕ್ಕೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.


ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕತೆ-ಜಿಡಿಪಿ ಬೆಳವಣಿಗೆ ಆಗುತ್ತದೆ. ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳನ್ನು ನಾಡಿನ ಜನತೆಗೆ ಕೊಟ್ಟಿದ್ದೇವೆ ಎಂದರು.
ಸಾಮಾಜಿಕ, ಆರ್ಥಿಕ ಅಸಮಾನತೆ ತೊಡೆದು ಹಾಕಿದಾಗ ಮಾತ್ರ ವರ್ಗರಹಿತ, ಜಾತಿ ರಹಿತ ಸಮಾಜ ನಿರ್ಮಾಣ ಸಾಧ್ಯ. ಕಾಂಗ್ರೆಸ್ ಸರ್ಕಾರ ಸಮಾಜದ ಅಸಮಾನತೆ ಅಳಿಸಿ ಎಲ್ಲ ವರ್ಗದವರೂ ಮುಖ್ಯವಾಹಿನಿಗೆ ಬರುವ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ. ನಾನು ಮುಖ್ಯಮಂತ್ರಿಯಾದಿ ದಲಿತರು, ಹಿಂದುಳಿದ ವರ್ಗದವರು ಮತ್ತು ಎಲ್ಲಾ ಜಾತಿಯ ಬಡವರಿಗೂ ಶಕ್ತಿ ತುಂಬುವ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ನೀಡಿದ್ದೇವೆ ಎಂದರು.


ಒಂದು ಕೋಟಿ ವರೆಗಿನ ಕಾಮಗಾರಿಗಳಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕೊಡುವ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ಘೋಷಿಸಿದ್ದೇವೆ. ಜತೆಗೆ ಐದು ಗ್ಯಾರಂಟಿ ಯೋಜನೆಗಳು ಮಹಿಳೆಯರು ಮತ್ತು ಅಶಕ್ತರಿಗೆ ಆರ್ಥಿಕ ಶಕ್ತಿ ತುಂಬುತ್ತಿದೆ. ಇದರಿಂದ ರಾಜ್ಯದ ಆರ್ಥಿಕತೆಯೂ ಬೆಳವಣಿಗೆಯಾಗುತ್ತಿದೆ ಎಂದರು.


ಹಾಸನದ ಹಿಂದುಳಿದ ವರ್ಗಗಳ ಸಮುದಾಯ ಭವನಕ್ಕೆ ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

Join Whatsapp
Exit mobile version