Home ಟಾಪ್ ಸುದ್ದಿಗಳು ರಾಜ್ಯದ ಎಲ್ಲಾ ಕಾರಾಗೃಹಗಳ ವ್ಯವಸ್ಥೆಯ ವರದಿ ಆಧರಿಸಿ ಶಾಶ್ವತ ಕ್ರಮ: ಪರಮೇಶ್ವರ್

ರಾಜ್ಯದ ಎಲ್ಲಾ ಕಾರಾಗೃಹಗಳ ವ್ಯವಸ್ಥೆಯ ವರದಿ ಆಧರಿಸಿ ಶಾಶ್ವತ ಕ್ರಮ: ಪರಮೇಶ್ವರ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಮತ್ತು ಇತರ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ವಿಚಾರವನ್ನು ಸರ್ಕಾರ ತೀರ್ಮಾನ ಮಾಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌  ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದೀಖಾನೆ ಪ್ರಾಧಿಕಾರವು ಕೋರ್ಟ್‌ ನ ನಿರ್ದೇಶನದ ಮೇರೆಗೆ ಆರೋಪಿಗಳನ್ನು ಸ್ಥಳಾಂತರ ಮಾಡಲಿದೆ.‌ ವಿಚಾರಣಾದೀನ ಕೈದಿಯಾಗಿರುವುದರಿಂದ ಕೆಲವು ನಿಯಮಗಳ ಪ್ರಕಾರವೇ ಸ್ಥಳಾಂತರ ಮಾಡಬೇಕಾಗುತ್ತದೆ. ಮುಂದಿನ ಎರಡು ದಿನಗಳಲ್ಲಿ ಸ್ಥಳಾಂತರ ಆಗಬಹುದು ಎಂದು ಮಾಹಿತಿ ನೀಡಿದ್ದಾರೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತೆ ದೃಷ್ಟಿಯಿಂದ ಆಂತರಿಕ ಆಡಳಿತದ ಬದಲಾವಣೆ ಮಾಡಬಹುದು. ಆದರೆ, ಮೂರು ಭಾಗ ಮಾಡಲು ಆಗುವುದಿಲ್ಲ. ಬ್ಲಾಕ್ 1, ಬ್ಲಾಕ್ 2 ಬ್ಲಾಕ್ 3 ಇವೆ. ಅದರ ಜೊತೆಗೆ ಬೇರೆ ಬ್ಯಾರಕ್‌ಗಳಿವೆ. ಇದರಲ್ಲಿ ಕೈದಿಗಳನ್ನು ಇರಿಸಲು ಮಾರ್ಪಾಡು ತರಬಹುದು, ಭಾಗ ಮಾಡುವುದಿಲ್ಲ ಎಂದು ತಿಳಿಸಿದರು.

Join Whatsapp
Exit mobile version