ಶಾಸಕ, ಸಂಸದ ವಿರುದ್ಧ ತನಿಖೆಗೆ ಅನುಮತಿ ಕಡ್ಡಾಯ: ಕೇಂದ್ರ ಸರಕಾರ

Prasthutha|

ನವದೆಹಲಿ: ಶಾ​ಸ​ಕ, ಸಂಸ​ದ​ರು ವಿರುದ್ಧ ಭ್ರಷ್ಟಾಚಾರ ಪ್ರಕರಣದ ತನಿಖೆ ಕೈಗೊಳ್ಳುವ ಪೊಲೀಸ್‌ ಅಧಿಕಾರಿಗಳು ಕಡ್ಡಾಯ ಅನುಮತಿ ಪಡೆಯಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.

- Advertisement -

1988ರ ಭ್ರಷ್ಟಾಚಾರ ನಿಯಂತ್ರಣದ ಕಾಯ್ದೆಗೆ 2018ರಲ್ಲಿ ತಿದ್ದುಪಡಿ ಮಾಡಲಾಗಿತ್ತು. ಅದರಂತೆ ಸಾರ್ವಜನಿಕ ಸೇವಕರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಕಡ್ಡಾಯ ಅನುಮತಿ ಪಡೆಯಬೇಕೆಂಬ ಕಾನೂನು ಜಾರಿಗೊಳಿಸಲಾಗಿತ್ತು.
ಇದರ ಅನುಷ್ಠಾನಕ್ಕಾಗಿ ಸೋಮವಾರ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಮಾರ್ಗಸೂಚಿಯ ಪ್ರಕಾರ ಕೇಂದ್ರ ಸಚಿವರು, ಸಂಸದರು, ರಾಜ್ಯಗಳ ಸಚಿವರು, ಶಾಸಕರು, ಸುಪ್ರೀಂ ಮತ್ತು ಹೈಕೋರ್ಟ್‌ ನ್ಯಾಯಾಧೀಶರು, ಸಾರ್ವಜನಿಕ ವಲಯದ ಸಂಸ್ಥೆಗಳ ಅಧ್ಯಕ್ಷರು ಅಥವಾ ವ್ಯವಸ್ಥಾಪಕ ನಿರ್ದೇಶಕರು, ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಮಂಡಳಿ ಹಂತದ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ದೂರುಗಳ ತನಿಖೆಗೆ ಕಡ್ಡಾಯವಾಗಿ ಅನುಮತಿಯನ್ನು ಪಡೆಯಲೇಬೇಕು ಎಂದು ಇದರಲ್ಲಿ ಸೂಚಿಸಲಾಗಿದೆ.

Join Whatsapp