ಅರ್ಜಿ ವಜಾ | ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

Prasthutha|

ಬಿಜೆಪಿ- ಜೆಡಿಎಸ್ ಪಿತೂರಿಗೆ ನಾನು ಹೆದರಲ್ಲ

- Advertisement -


ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದೆ.


ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಜ್ಞರ ಜೊತೆ ಚರ್ಚೆ ಮಾಡಿ ಕಾನೂನು ಹೋರಾಟಕ್ಕೆ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.

- Advertisement -


ಮೋದಿ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಬಿಜೆಪಿ- ಜೆಡಿಎಸ್ ಪಿತೂರಿಗೆ ನಾನು ಹೆದರಲ್ಲ ಎಂದು ಹೇಳಿದ್ದಾರೆ.


ಬಿಜೆಪಿ ಹಿಂಬಾಗಿಲಿನಿಂದ, ಹಣಬಲದಿಂದ ಅಧಿಕಾರಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.



Join Whatsapp