ಪಿಎಫ್ಐ ವಿರುದ್ಧ ಅವಹೇಳನಕಾರಿ ಲೇಖನ: ಹೊಸದಿಗಂತ ಅಂಕಣಕಾರ ಸಂತೋಷ್ ತಮ್ಮಯ್ಯ ವಿರುದ್ಧ ದೂರು ದಾಖಲು

Prasthutha|

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ವಿರುದ್ಧ ತಪ್ಪು ಅಭಿಪ್ರಾಯ ಮೂಡುವಂತೆ ಹೊಸದಿಗಂತ ಪತ್ರಿಕೆಯಲ್ಲಿ ಲೇಖನ ಬರೆದ ಅಂಕಣಕಾರ ಸಂತೋಷ್ ತಮ್ಮಯ್ಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಪಂಜಿಮೊಗರು ನಿವಾಸಿ ಮುಹಮ್ಮದ್ ಎಂಬವರು ಈ ಬಗ್ಗೆ ಕಾವೂರು ಠಾಣೆಗೆ ದೂರು ನೀಡಿದ್ದಾರೆ.

ಫೆಬ್ರವರಿ 25ರಂದು ಹೊಸದಿಗಂತ ಪತ್ರಿಕೆಯಲ್ಲಿ ಸಂತೋಷ್ ತಮ್ಮಯ್ಯ ಎಂಬ ಬರಹಗಾರರು “ಅಂದು ಮುಸ್ಲಿಮ್ ಲೀಗ್, ಇಂದು ಪಿಎಫ್ಐ” ಎಂಬ ಶೀರ್ಷಿಕೆಯಲ್ಲಿ ಪಿಎಫ್ಐ ಸಂಘಟನೆಯ ವಿರುದ್ಧ ಅವಹೇಳನಕಾರಿಯಾಗಿ ಬರೆದಿದ್ದಾರೆ. ಸುಳ್ಳು ಮಾಹಿತಿಗಳನ್ನು ಒಳಗೊಂಡ ಈ ಲೇಖನದ ಮೂಲಕ ಸಂಘಟನೆಯ ತೇಜೋವಧೆಗೆ ಪ್ರಯತ್ನಿಸಲಾಗಿದೆ. ಆದ್ದರಿಂದ ಸಂತೋಷ್ ತಮ್ಮಯ್ಯ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮುಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

ದೂರು ಸ್ವೀಕರಿಸಿರುವ ಕಾವೂರು ಪೊಲೀಸರು ಕಾನೂನು ಪ್ರಕಾರ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Join Whatsapp