ಎನ್‌ಐಎ ದಾಳಿ ಖಂಡಿಸಿ PFIಯಿಂದ ನಾಳೆ ಕೇರಳದಲ್ಲಿ ಹರತಾಳ

Prasthutha|

ಕೋಝಿಕ್ಕೋಡ್: ದೇಶಾದ್ಯಂತ ಪಿಎಫ್‌ಐ, ಎಸ್‌ಡಿಪಿಐ ಕಚೇರಿ, ನಾಯಕರ ಮನೆ ಮೇಲಿನ ಎನ್‌ಐಎ ದಾಳಿಯನ್ನು ಖಂಡಿಸಿ ನಾಳೆ ರಾಜ್ಯದಲ್ಲಿ ಬಂದ್‌ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿದೆ.
ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಹರತಾಳ ನಡೆಯಲಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎ ಅಬ್ದುಲ್ ಸತ್ತಾರ್ ಹೇಳಿದ್ದಾರೆ.

- Advertisement -


ಕೇರಳ ಸೇರಿದಂತೆ ದೇಶದ 13 ರಾಜ್ಯಗಳಲ್ಲಿ ಎನ್‌ಐಎ ಮತ್ತು ಇಡಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಚೇರಿಗಳು ಮತ್ತು ನಾಯಕರ ಮನೆಗಳ ಮೇಲೆ ಜಂಟಿ ದಾಳಿಗಳನ್ನು ಆಯೋಜಿಸಿತ್ತು. ರಾಷ್ಟ್ರೀಯ ನಾಯಕರು ಸೇರಿದಂತೆ 106 ಜನರನ್ನು ಬಂಧಿಸಲಾಗಿದ್ದು, ಈ ಪೈಕಿ ಹೆಚ್ಚಿನ ನಾಯಕರನ್ನು ಕೇರಳದಿಂದ ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಹರತಾಳಕ್ಕೆ ಕರೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Join Whatsapp